11:54 AM Thursday7 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಮಹಾ ಮಳೆಗೆ ಹಳಿಗೆ ಹಾನಿ; ರೈಲ್ವೆ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ದುರಂತ

23/10/2025, 13:48

info.reporterkarnataka@gmail.com

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮುಂದುವರಿದ ಭಾರೀ ಮಹಾಮಳೆಗೆ ರೈಲ್ವೆ ಹಳಿ ಕೊಚ್ಚಿ ಹೋಗಿದ್ದು, ಭಾರೀ ದುರಂತ ತಪ್ಪಿದೆ.
ರಾತ್ರಿ ಸುರಿದ ಧಾರಾಕಾರ ಮಳೆಗೆ ಚಿಕ್ಕಮಗಳೂರು ತಾಲೂಕಿನ ಕಣಿವೆ ಗ್ರಾಮದ ಬಳಿ ರೈಲ್ವೆ ಹಳಿ ಕೊಚ್ಚಿ ಹೋಗಿದೆ. ರೈಲ್ವೆ ಹಳಿಯ ಜಲ್ಲಿ ಕಲ್ಲುಗಳು ಕೊಚ್ಚಿ ಹೋಗಿ, ಹಳಿಗಳ ಬುಡದ ಅಡಿಪಾಯ ತಪ್ಪಿದೆ. ರೈಲ್ವೆ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ.

ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ಪ್ಯಾಸೆಂಜರ್ ರೈಲು ಹೊರಟಿತ್ತು. ಕಣಿವೆ ರೈಲ್ವೆ ಸ್ಟೇಷನ್ ಸಿಬ್ಬಂದಿಗಳಿಂದ ರೈಲು ಚಾಲಕನಿಗೆ ಮಾಹಿತಿ ನೀಡಲಾಯಿತು.
ಚಲಿಸುತ್ತಿದ್ದ ರೈಲನ್ನ ತಕ್ಷಣವೇ ಚಾಲಕ ನಿಲ್ಲಿಸಿದ್ದರು. ನಂತರ ಸಿಬ್ಬಂದಿಗಳು ಹಳಿ ದುರಸ್ತಿಪಡಿಸಿದರು. 30 ನಿಮಿಷ ರೈಲು ನಿಂತಿತ್ತು.
ಬೆಳಗ್ಗೆ 7.10ಕ್ಕೆ ಚಿಕ್ಕಮಗಳೂರು ನಗರದಿಂದ ರೈಲು ಹೊರಟಿತ್ತು. ರಾತ್ರಿ ಸುರಿದ ಭಾರಿ ಮಳೆಗೆ ರೈಲ್ವೆ ಹಳಿ ಕೊಚ್ಚಿ ಹೊಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು