11:07 PM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ಕಡೂರು ಸಮೀಪದ ಹಡಗಲು ಗ್ರಾಮ ಅಕ್ಷರಶಃ ಜಲಾವೃತ

23/10/2025, 20:48

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಹಾಮಳೆಗೆ ಕಾಫಿನಾಡ ಬಯಲುಸೀಮೆಯಲ್ಲಿ ಅಲ್ಲೋಲ-ಕಲ್ಲೋಲ ಉಂಟಾಗಿದೆ. ಚಿಕ್ಕಮಗಳೂರು-ಚಿತ್ರದುರ್ಗ ಗಡಿ ಭಾಗವಾಗಿರೋ ಕಡೂರು ತಾಲೂಕಿನ ಹಡಗಲು ಗ್ರಾಮ ಅಕ್ಷರಶಃ ಜಲಾವೃತಗೊಂಡಿದೆ.

ಡ್ರೋನ್ ಕಣ್ಣಲ್ಲಿ ರೈತರ ಬದುಕು ಜಲಾವೃತವಾದ ಕರುಣಾಜನಕ‌ ದೃಶ್ಯ ಸೆರೆಯಾಗಿದೆ.
ಮೂರ್ನಾಲ್ಕು ದಿನಗಳಿಂದ ನಿರಂತರವಾಗಿ ಸುರಿಯುತ್ತಿರೋ ಮಳೆಯಿಂದ ಚಿಕ್ಕಮಗಳೂರು ಜಿಲ್ಲೆಯ ಜಲಾವೃತಗೊಂಡಿದೆ. ಎರಡು ದಶಕದ ಬಳಿಕ ಸುರಿದ ದಾಖಲೆ ಮಳೆಗೆ ಬಯಲುಸೀಮೆ ಜನರು ಕಂಗಾಲಾಗಿದ್ದಾರೆ. ರಾತ್ರಿ ವೇಳೆಯಲ್ಲಂತೂ ಮಳೆರಾಯ
ರೌದ್ರರೂಪ ತಾಳುತ್ತಿದ್ದಾನೆ.
ನಿನ್ನೆ ರಾತ್ರಿ ಸುರಿದ ಮಳೆಯಿಂದ ಹಡಗಲು ಗ್ರಾಮದ ಜನರು ಕಂಗಾಲಾಗಿದ್ದಾರೆ. ತೋಟ, ಆಹಾರ ಬೆಳೆ ಯಾವುದನ್ನು ಬಿಡದಂತೆ ಮಳೆರಾಯ ಆವರಿಸಿಕೊಂಡಿದ್ದಾನೆ.
ಬೆಳೆ ಸ್ಥಿತಿ ಕಂಡ ಬಯಲುಸೀಮೆ‌ ರೈತರು ಕಂಗಾಲಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು