5:27 AM Wednesday29 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಮಂಗಳೂರು ಪರಿಸರದಲ್ಲಿ ಮತ್ತೆ ಶಾಂತಿ ಕೆದುಕುವ ಪ್ರಯತ್ನ: ಸುರತ್ಕಲ್ ಬಳಿ ಇಬ್ಬರಿಗೆ ಚೂರಿ ಇರಿತ

24/10/2025, 11:29

ಮಂಗಳೂರು(reporterKarnataka.com): ಸುರತ್ಕಲ್ ಸಮೀಪದ ಬಾರೊಂದರಲ್ಲಿ ಇಬ್ಬರ ಮೇಲೆ ತಂಡವೊಂದು ಚಾಕುವಿನಿಂದ ಇರಿದ ಘಟನೆ ನಡೆದಿದೆ. ಇದರೊಂದಿಗೆ ಶಾಂತವಾಗಿದ್ದ ಮಂಗಳೂರು ಪರಿಸರದಲ್ಲಿ ಮತ್ತೆ ಶಾಂತಿ ಕೆದಕುವ ಪ್ರಯತ್ನ ನಡೆದಿದೆ.
ಕೃಷ್ಣಾಪುರದ ನಿವಾಸಿಗಳಾದ ನಿಜಾಮ್(23 ) ಹಾಗೂ ಮುರ್ಷಿದ್(18) ಇತರ ಇಬ್ಬರೊಂದಿಗೆ ಬಾರ್‌ಗೆ ತೆರಳಿದ್ದಾಗ ಅಲ್ಲಿಗೆ ಆಗಮಿಸಿ ತಂಡವೊಂದು ನಿಜಾಮ್ ಮತ್ತು ಮುರ್ಷಿದ್ ಅವರಿಗೆ ಚಾಕುವಿನಿಂದ ಇರಿದಿದೆ. ನಿಜಾಮ್ ಹೊಟ್ಟೆಗೆ ಚಾಕು ಹಾಕಿರುವುದರಿಂದ ಆತ ತೀವ್ರವಾಗಿ ಗಾಯಗೊಂಡಿದ್ದಾನೆ. ನಿಜಾಮ್
ಜತೆಗಿದ್ದ ಮುರ್ಷಿದ್ ಕೈಗೆ ಸಣ್ಣಪುಟ್ಟ ಗಾಯಗಳಾಗಿವೆ. ಮುರ್ಷಿದ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಈ ಘಟನೆ ಕುರಿತಂತೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ನಾಲ್ವರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ 307ನೇ ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರು ರಾತ್ರಿ ಆರೋಪಿಗಳ ಅಡಗಿದ್ದ ಸ್ಥಳಕ್ಕೆ ತೆರಳಿದರೂ ಅವರು ಆಗಲೇ ಪರಾರಿಯಾಗಿದ್ದರು. ಶುಕ್ರವಾರ ಬೆಳಗ್ಗೆ ಪೊಲೀಸ್ ಕಮಿಷನರ್ ಆಸ್ಪತ್ರೆ ಭೇಟಿ ನೀಡಿ ತನಿಖೆ ಪರಿಶೀಲಿಸಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು