11:53 PM Wednesday4 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

ಮಂಗಳೂರು ಪರಿಸರದಲ್ಲಿ ಮತ್ತೆ ಶಾಂತಿ ಕೆದುಕುವ ಪ್ರಯತ್ನ: ಸುರತ್ಕಲ್ ಬಳಿ ಇಬ್ಬರಿಗೆ ಚೂರಿ ಇರಿತ

24/10/2025, 11:29

ಮಂಗಳೂರು(reporterKarnataka.com): ಸುರತ್ಕಲ್ ಸಮೀಪದ ಬಾರೊಂದರಲ್ಲಿ ಇಬ್ಬರ ಮೇಲೆ ತಂಡವೊಂದು ಚಾಕುವಿನಿಂದ ಇರಿದ ಘಟನೆ ನಡೆದಿದೆ. ಇದರೊಂದಿಗೆ ಶಾಂತವಾಗಿದ್ದ ಮಂಗಳೂರು ಪರಿಸರದಲ್ಲಿ ಮತ್ತೆ ಶಾಂತಿ ಕೆದಕುವ ಪ್ರಯತ್ನ ನಡೆದಿದೆ.
ಕೃಷ್ಣಾಪುರದ ನಿವಾಸಿಗಳಾದ ನಿಜಾಮ್(23 ) ಹಾಗೂ ಮುರ್ಷಿದ್(18) ಇತರ ಇಬ್ಬರೊಂದಿಗೆ ಬಾರ್‌ಗೆ ತೆರಳಿದ್ದಾಗ ಅಲ್ಲಿಗೆ ಆಗಮಿಸಿ ತಂಡವೊಂದು ನಿಜಾಮ್ ಮತ್ತು ಮುರ್ಷಿದ್ ಅವರಿಗೆ ಚಾಕುವಿನಿಂದ ಇರಿದಿದೆ. ನಿಜಾಮ್ ಹೊಟ್ಟೆಗೆ ಚಾಕು ಹಾಕಿರುವುದರಿಂದ ಆತ ತೀವ್ರವಾಗಿ ಗಾಯಗೊಂಡಿದ್ದಾನೆ. ನಿಜಾಮ್
ಜತೆಗಿದ್ದ ಮುರ್ಷಿದ್ ಕೈಗೆ ಸಣ್ಣಪುಟ್ಟ ಗಾಯಗಳಾಗಿವೆ. ಮುರ್ಷಿದ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಈ ಘಟನೆ ಕುರಿತಂತೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ನಾಲ್ವರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ 307ನೇ ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರು ರಾತ್ರಿ ಆರೋಪಿಗಳ ಅಡಗಿದ್ದ ಸ್ಥಳಕ್ಕೆ ತೆರಳಿದರೂ ಅವರು ಆಗಲೇ ಪರಾರಿಯಾಗಿದ್ದರು. ಶುಕ್ರವಾರ ಬೆಳಗ್ಗೆ ಪೊಲೀಸ್ ಕಮಿಷನರ್ ಆಸ್ಪತ್ರೆ ಭೇಟಿ ನೀಡಿ ತನಿಖೆ ಪರಿಶೀಲಿಸಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು