1:36 AM Sunday22 - March 2026
ಬ್ರೇಕಿಂಗ್ ನ್ಯೂಸ್
ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ

ಇತ್ತೀಚಿನ ಸುದ್ದಿ

ಮಂಗಳೂರು ಪರಿಸರದಲ್ಲಿ ಮತ್ತೆ ಶಾಂತಿ ಕೆದುಕುವ ಪ್ರಯತ್ನ: ಸುರತ್ಕಲ್ ಬಳಿ ಇಬ್ಬರಿಗೆ ಚೂರಿ ಇರಿತ

24/10/2025, 11:29

ಮಂಗಳೂರು(reporterKarnataka.com): ಸುರತ್ಕಲ್ ಸಮೀಪದ ಬಾರೊಂದರಲ್ಲಿ ಇಬ್ಬರ ಮೇಲೆ ತಂಡವೊಂದು ಚಾಕುವಿನಿಂದ ಇರಿದ ಘಟನೆ ನಡೆದಿದೆ. ಇದರೊಂದಿಗೆ ಶಾಂತವಾಗಿದ್ದ ಮಂಗಳೂರು ಪರಿಸರದಲ್ಲಿ ಮತ್ತೆ ಶಾಂತಿ ಕೆದಕುವ ಪ್ರಯತ್ನ ನಡೆದಿದೆ.
ಕೃಷ್ಣಾಪುರದ ನಿವಾಸಿಗಳಾದ ನಿಜಾಮ್(23 ) ಹಾಗೂ ಮುರ್ಷಿದ್(18) ಇತರ ಇಬ್ಬರೊಂದಿಗೆ ಬಾರ್‌ಗೆ ತೆರಳಿದ್ದಾಗ ಅಲ್ಲಿಗೆ ಆಗಮಿಸಿ ತಂಡವೊಂದು ನಿಜಾಮ್ ಮತ್ತು ಮುರ್ಷಿದ್ ಅವರಿಗೆ ಚಾಕುವಿನಿಂದ ಇರಿದಿದೆ. ನಿಜಾಮ್ ಹೊಟ್ಟೆಗೆ ಚಾಕು ಹಾಕಿರುವುದರಿಂದ ಆತ ತೀವ್ರವಾಗಿ ಗಾಯಗೊಂಡಿದ್ದಾನೆ. ನಿಜಾಮ್
ಜತೆಗಿದ್ದ ಮುರ್ಷಿದ್ ಕೈಗೆ ಸಣ್ಣಪುಟ್ಟ ಗಾಯಗಳಾಗಿವೆ. ಮುರ್ಷಿದ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಈ ಘಟನೆ ಕುರಿತಂತೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ನಾಲ್ವರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ 307ನೇ ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರು ರಾತ್ರಿ ಆರೋಪಿಗಳ ಅಡಗಿದ್ದ ಸ್ಥಳಕ್ಕೆ ತೆರಳಿದರೂ ಅವರು ಆಗಲೇ ಪರಾರಿಯಾಗಿದ್ದರು. ಶುಕ್ರವಾರ ಬೆಳಗ್ಗೆ ಪೊಲೀಸ್ ಕಮಿಷನರ್ ಆಸ್ಪತ್ರೆ ಭೇಟಿ ನೀಡಿ ತನಿಖೆ ಪರಿಶೀಲಿಸಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು