10:01 AM Tuesday16 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಬೆಂಗಳೂರು ಲಾಡ್ಜ್‌ನಲ್ಲಿ ಯುವತಿ ಜತೆ ತಂಗಿದ್ದ ಯುವಕನ ಸಾವಿಗೆ ಕಿಡ್ನಿ ವೈಫಲ್ಯ ಕಾರಣ: ಮರಣೋತ್ತರ ಪರೀಕ್ಷಾ ವರದಿಯಿಂದ ಬಹಿರಂಗ

24/10/2025, 15:31

ಗಿರಿಧರ್ ಕೊಂಪುಳಿರ ಬೆಂಗಳೂರು

info.reporterkarnataka@gmail com

ಬೆಂಗಳೂರು ನಗರದ ಮಡಿವಾಳದಲ್ಲಿರುವ ಲಾಡ್ಜ್‌ನಲ್ಲಿ ಪುತ್ತೂರು ಮೂಲದ ಯುವಕ ತಕ್ಷಿತ್ ಸಾವಿಗೀಡಾದ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ರಾಜ್ಯದಾದ್ಯಂತ ಚರ್ಚೆಗೆ ಕಾರಣವಾಗಿದ್ದ ಈ ಪ್ರಕರಣದ ಮರಣೋತ್ತರ ಪರೀಕ್ಷಾ ವರದಿ ಈಗ ಪೊಲೀಸರ ಕೈ ಸೇರಿದ್ದು, ಅದರಲ್ಲಿ ಮಹತ್ವದ ಮಾಹಿತಿ ಬಹಿರಂಗವಾಗಿದೆ.
ವರದಿಯ ಪ್ರಕಾರ, ತಕ್ಷಿತ್ ಕಿಡ್ನಿ ವೈಫಲ್ಯದಿಂದ ಸಾವನ್ನಪ್ಪಿದ್ದಾನೆ ಎಂಬುದು ದೃಢಪಟ್ಟಿದೆ. ಜೊತೆಗೆ ಆತನಿಗೆ ಲಿವರ್ ಸಮಸ್ಯೆ ಹಾಗೂ ಅಸ್ತಮಾದಿಂದ ಕೂಡ ಇತ್ತು ಎಂದು ವರದಿಯಲ್ಲಿ ಉಲ್ಲೇಖವಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಯುವಕನ ಸಾವು ಆರೋಗ್ಯ ಸಮಸ್ಯೆಯಿಂದ ಸಂಭವಿಸಿರುವ ಸಾಧ್ಯತೆ ಹೆಚ್ಚು ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿಯ ಪ್ರಕಾರ, ತಕ್ಷಿತ್ ಹಾಗೂ ಓರ್ವ ಯುವತಿ ಕಳೆದ ಎಂಟು ದಿನಗಳಿಂದ ಮಡಿವಾಳದ ಲಾಡ್ಜ್‌ನಲ್ಲಿ ವಾಸವಾಗಿದ್ದರು. ಈ ಅವಧಿಯಲ್ಲಿ ತಕ್ಷಿತ್ ಏಕಾಏಕಿ ಅಸ್ವಸ್ಥಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದ. ಘಟನೆಯು ಅನುಮಾನಾಸ್ಪದವಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಯುವತಿಯನ್ನು ವಿಚಾರಣೆಗೊಳಪಡಿಸಿದ್ದು, ಆಕೆ “ಫುಡ್ ಪಾಯಿಸನ್ ಆಗಿರಬಹುದು” ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ.
ಯುವತಿ ಹಾಗೂ ತಕ್ಷಿತ್ ಆನ್‌ಲೈನ್ ಮೂಲಕ ಆಹಾರವನ್ನು ಎಲ್ಲಿಂದ ಆರ್ಡರ್ ಮಾಡಿದ್ದರು, ಅವರು ಸೇವಿಸಿದ ಮಾತ್ರೆಗಳ ಸ್ವರೂಪ ಏನು ಎಂಬುದರ ಕುರಿತು ಸ್ಪಷ್ಟ ಮಾಹಿತಿ ಇನ್ನೂ ದೊರೆತಿಲ್ಲ. ಕಿಡ್ನಿ ವೈಫಲ್ಯಕ್ಕೆ ನಿಖರವಾದ ಕಾರಣ ಪತ್ತೆಹಚ್ಚಲು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು