1:26 AM Friday19 - December 2025
ಬ್ರೇಕಿಂಗ್ ನ್ಯೂಸ್
ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ

ಇತ್ತೀಚಿನ ಸುದ್ದಿ

ಪುತ್ತೂರು ಶಾಸಕರ ಆರೋಪದ ಬೆನ್ನಲ್ಲೇ ಮಹಾಲಿಂಗೇಶ್ವರ ದೇಗುಲದ ಬಾಕಿ ಮೊತ್ತ 25 ಸಾವಿರ ಪಾವತಿಸಿದ ಮಾಜಿ ಶಾಸಕ ಮಠಂದೂರು!

25/10/2025, 16:23

ಪುತ್ತೂರು(reporterkarnataka.com): ಇಲ್ಲಿನ ಶ್ರೀ ಮಹಾಲಿಂಗೇಶ್ವರ ರಥೋತ್ಸವ ಸಂದರ್ಭದಲ್ಲಿ ಬ್ರಹ್ಮರಥ ಪೂಜೆಗೆ ರಶೀದಿ ಮಾಡಿಸಿ, ಪೂಜೆ ಪ್ರಸಾದ ಸ್ವೀಕರಿಸಿ 25 ಸಾವಿರ ರೂ. ಪಾವತಿಸದೆ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಮಹಾಲಿಂಗೇಶ್ವರನಿಗೆ ವಂಚಿಸಿದ್ದಾರೆ ಎಂದು ಹಾಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಆರೋಪಿಸಿದ ಬೆನ್ನಲ್ಲೇ ಮಠಂದೂರು ಅವರು ದೇಗುಲಕ್ಕೆ ಹಣ ಪಾವತಿಸಿದ್ದಾರೆ.
ಶಾಸಕ ಅಶೋಕ್ ಕುಮಾರ್ ರೈ ಅವರು ಇತ್ತೀಚೆಗೆ ನಡೆಸಿದ ಅಶೋಕ ಜನ-ಮನ ಕಾರ್ಯಕ್ರಮದಲ್ಲಿ 13 ಮಂದಿ ಅಸ್ವಸ್ಥರಾದ ಕುರಿತು ಮಠಂದೂರು ಅವರು ಪ್ರತಿಕ್ರಿಯಿಸಿ, ಇದಕ್ಕೆ ಶಾಸಕ ಅಶೋಕ್ ಕುಮಾರ್ ರೈ ಅವರ ಬೇಜವಾಬ್ದಾರಿ ಕಾರಣ ಎಂದು ಟೀಕಿಸಿದ್ದರು. ಇದರಿಂದ ಆಕ್ರೋಶಗೊಂಡ ಅಶೋಕ್ ಕುಮಾರ್ ರೈ ಅವರು ಮಾಜಿ ಶಾಸಕರು ಪ್ರಸಾದ ಸ್ವೀಕರಿಸಿ 25 ಸಾವಿರ ರೂ. ಪಾವತಿಸದೆ ವಂಚಿಸಿದ್ದಾರೆ ಎಂದು ಖಾರವಾಗಿ ಆರೋಪಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು