6:24 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

Bantwal | ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಆಗ್ರಹಿಸಿ ಪೋಸ್ಟ್ ಕಾರ್ಡ್ ಚಳವಳಿ

25/10/2025, 17:35

ಬಂಟ್ವಾಳ(reporterkarnataka.com): ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಯಾಗಬೇಕೆಂದು ಆಗ್ರಹಿಸಿ ಬಿ.ಸಿ. ರೋಡ್ ನಲ್ಲಿ ಬಂಟ್ವಾಳ ವಕೀಲರ ಸಂಘ ಮತ್ತು ಸಾರ್ವಜನಿಕರ ಸಹಯೋಗದಲ್ಲಿ ಪೋಸ್ಟ್ ಕಾರ್ಡ್ ಚಳವಳಿ ನಡೆಯಿತು.

ಬಂಟ್ವಾಳ ವಕೀಲರ ಸಂಘದ ಮಾಜಿ ಅಧ್ಯಕ್ಷ ಪಿ.ಜಯರಾಮ ರೈ ಅವರು ಪೋಸ್ಟ್ ಕಾರ್ಡ್ ಚಳಿವಳಿಗೆ ಚಾಲನೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ಜಿಲ್ಲಾಧ್ಯಕ್ಷ ಹಾಗೂ ವಕೀಲರ ಸಂಘ (ರಿ), ಬಂಟ್ವಾಳ ಇದರ ಅಧ್ಯಕ್ಷ ರಿಚರ್ಡ್ ಕೊಸ್ತಾ ಎಂ. ರವರು ಪೋಸ್ಟ್ ಕಾರ್ಡ್ ಚಳವಳಿಯನ್ನು ಉದ್ದೇಶಿಸಿ ಮಾತನಾಡಿದರು. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಂಗಳೂರು, ಜಿಲ್ಲೆಗಳಿಗೆ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ರಚನೆಯಾಗ ಬೇಕೆಂದು ಎರಡು ದಶಕಗಳ ಹಿಂದೆ ಮಂಗಳೂರಿನ ವಕೀಲರ ಸಂಘದ ಮಾಜಿ ಅಧ್ಯಕ್ಷ ಎಸ್.ಪಿ. ಚಂಗಪ್ಪರವರ ನೇತೃತ್ವದಲ್ಲಿ ಹೋರಾಟ ಪ್ರಾರಂಭವಾಗಿತ್ತು. ಪ್ರಸ್ತುತ ಒಂದುವರೆ ವರ್ಷಗಳಿಂದ ಮಂಗಳೂರಿನ ಈಗಿನ ಅಧ್ಯಕ್ಷರಾದ ರಾಘವೇಂದ್ರ ರವರ ನೇತೃತ್ವದಲ್ಲಿ ಇದಕ್ಕೆ ಮತ್ತೆ ವೇಗ ಸಿಕ್ಕಿದೆ. ಅದರ ಮುಂದುವರಿದ ಹೋರಾಟದ ಅಂಗವಾಗಿ ಪೋಸ್ಟ್ ಕಾರ್ಡ್ ಅಭಿಯಾನ ಇಂದು ಉಡುಪಿ ಮತ್ತು ಮಂಗಳೂರು ಜಿಲ್ಲೆಯ ಎಲ್ಲಾ ವಕೀಲರ ಸಂಘಗಳ ಸಹಯೋಗದಲ್ಲಿ ಏಕ ಕಾಲದಲ್ಲಿ ನಡೆಯುತ್ತಿದೆ.
ಹೈ ಕೋರ್ಟ್ ಪೀಠ ರಚನೆಗೆ ಮಂಗಳೂರಿನಲ್ಲಿ ಜಾಗ ಗುರುತಿಸಿದ್ದು, ಸರಕಾರ ಮತ್ತು ರಾಜ್ಯಪಾಲರಿಗೆ ಒತ್ತಾಯಿಸುವ ನಿಟ್ಟಿನಲ್ಲಿ ಅಭಿಯಾನ ಮತ್ತು ಹೋರಾಟಗಳು ಪ್ರಾರಂಭವಾಗಿದೆ. ಈ ಹೋರಾಟಕ್ಕೆ ಎಲ್ಲಾ ಸಂಘ ಸಂಸ್ಥೆಗಳು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಹಿರಿಯ, ಕಿರಿಯ ವಕೀಲ ಮಿತ್ರರು, ಸಾರ್ವಜನಿಕರು, ಪೋಸ್ಟ್ ಕಾರ್ಡ್ ಅಭಿಯಾನ ದಲ್ಲಿ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು