7:30 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ | ಮಾಜಿ ಗೃಹ ಸಚಿವರ ತವರಿನಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಅಕ್ರಮ ಮರಳು ದಂಧೆ!!: ಅಧಿಕಾರಿಗಳು ಮೌನಕ್ಕೆ ಶರಣು!

27/10/2025, 13:17

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.karnataka@gmail.com

ತೀರ್ಥಹಳ್ಳಿಯಲ್ಲಿ ಎಗ್ಗಿಲ್ಲದೇ ಮರಳು ದಂಧೆ ನಡೆಯುತ್ತಿದ್ದು,
ಗಣಿ ಮತ್ತು ಭೂ ವಿಜ್ಞಾನ, ಕಂದಾಯ, ಅರಣ್ಯ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ.
ಹರಿಯುವ ನದಿ ನೀರಿನಲ್ಲಿಯೇ ಮರಳು ದಂಧೆ ಅವ್ಯಾಹತವಾಗಿ ಸಾಗುತ್ತಿದೆ. ಇವೆಲ್ಲದರ ಮಧ್ಯೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಕಂದಾಯ ಇಲಾಖೆ, ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಕಣ್ಣು ಮುಚ್ಚಿ ಕತ್ತಲು ಮಾಡಿಕೊಳ್ಳುತ್ತಿದ್ದಾರೆ.


ಅಧಿಕಾರಿಗಳು ಎಷ್ಟು ಜಾಣ ನಿದ್ದೆಯಲ್ಲಿ ಇದ್ದಾರೆ ಎಂಬುದಕ್ಕೆ ಮರಳು ದಂಧೆಯೇ ಸಾಕ್ಷಿಯಾಗಿದೆ.
ಹಗಲಿನ ವೇಳೆಯಲ್ಲಿಯೇ ಮರಳನ್ನು ನೇರವಾಗಿ ಜೆಸಿಬಿ‌ ಮೂಲಕ ದಂಧೆಕೋರರು ಎತ್ತುತ್ತಿದ್ದಾರೆ. ಆರಗ ಸಮೀಪದ ಸಂಕದಹೊಳೆಯ ಗೋಪಿನಾಥ ಹಳ್ಳದಿಂದ ಮರಳು ಸಾಗಾಟ ನಡೆಯುತ್ತಿದೆ. ಶಾಸಕ ಆರಗ ಜ್ಞಾನೇಂದ್ರರ ಊರಲ್ಲೇ ನಡೆಯುತ್ತಿದೆ ಮರಳು ಮಾಫಿಯ..! ಮರಳು ದಂಧೆ ಬಗ್ಗೆ ಗೊತ್ತಿದ್ದರೂ ಶಾಸಕರು ಮೌನವಾಗಿದ್ದಾರೆ. ಜಣ ಜಣ ಕಾಂಚಾಣದ ಕೆಲಸ ನಡೆಯುತ್ತಿರುವ ಶಂಕೆ ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು