12:17 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ | ಮಾಜಿ ಗೃಹ ಸಚಿವರ ತವರಿನಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಅಕ್ರಮ ಮರಳು ದಂಧೆ!!: ಅಧಿಕಾರಿಗಳು ಮೌನಕ್ಕೆ ಶರಣು!

27/10/2025, 13:17

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.karnataka@gmail.com

ತೀರ್ಥಹಳ್ಳಿಯಲ್ಲಿ ಎಗ್ಗಿಲ್ಲದೇ ಮರಳು ದಂಧೆ ನಡೆಯುತ್ತಿದ್ದು,
ಗಣಿ ಮತ್ತು ಭೂ ವಿಜ್ಞಾನ, ಕಂದಾಯ, ಅರಣ್ಯ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ.
ಹರಿಯುವ ನದಿ ನೀರಿನಲ್ಲಿಯೇ ಮರಳು ದಂಧೆ ಅವ್ಯಾಹತವಾಗಿ ಸಾಗುತ್ತಿದೆ. ಇವೆಲ್ಲದರ ಮಧ್ಯೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಕಂದಾಯ ಇಲಾಖೆ, ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಕಣ್ಣು ಮುಚ್ಚಿ ಕತ್ತಲು ಮಾಡಿಕೊಳ್ಳುತ್ತಿದ್ದಾರೆ.


ಅಧಿಕಾರಿಗಳು ಎಷ್ಟು ಜಾಣ ನಿದ್ದೆಯಲ್ಲಿ ಇದ್ದಾರೆ ಎಂಬುದಕ್ಕೆ ಮರಳು ದಂಧೆಯೇ ಸಾಕ್ಷಿಯಾಗಿದೆ.
ಹಗಲಿನ ವೇಳೆಯಲ್ಲಿಯೇ ಮರಳನ್ನು ನೇರವಾಗಿ ಜೆಸಿಬಿ‌ ಮೂಲಕ ದಂಧೆಕೋರರು ಎತ್ತುತ್ತಿದ್ದಾರೆ. ಆರಗ ಸಮೀಪದ ಸಂಕದಹೊಳೆಯ ಗೋಪಿನಾಥ ಹಳ್ಳದಿಂದ ಮರಳು ಸಾಗಾಟ ನಡೆಯುತ್ತಿದೆ. ಶಾಸಕ ಆರಗ ಜ್ಞಾನೇಂದ್ರರ ಊರಲ್ಲೇ ನಡೆಯುತ್ತಿದೆ ಮರಳು ಮಾಫಿಯ..! ಮರಳು ದಂಧೆ ಬಗ್ಗೆ ಗೊತ್ತಿದ್ದರೂ ಶಾಸಕರು ಮೌನವಾಗಿದ್ದಾರೆ. ಜಣ ಜಣ ಕಾಂಚಾಣದ ಕೆಲಸ ನಡೆಯುತ್ತಿರುವ ಶಂಕೆ ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು