7:47 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

BSNL problem | ಕೊಟ್ಟಿಗೆಹಾರದಲ್ಲಿ ಬಿಎಸ್ಸೆನ್ನೆಲ್ ನೆಟ್ವರ್ಕ್ ನಾಪತ್ತೆ: ಒಂದು ತಿಂಗಳಿಂದ ಜನ ಕಂಗಾಲು

27/10/2025, 17:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnata@gmail.com

ಕಳೆದ ಒಂದು ತಿಂಗಳಿಂದ ಕೊಟ್ಟಿಗೆಹಾರ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಬಿಎಸ್ಎನ್ಎಲ್ ಮೊಬೈಲ್ ನೆಟ್ವರ್ಕ್ ಸಂಪೂರ್ಣ ಸ್ಥಗಿತಗೊಂಡಿದ್ದು, ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಗ್ರಾಮೀಣ ಪ್ರದೇಶದ ಬಹುತೇಕ ಜನರು ಬಿಎಸ್ಎನ್ಎಲ್ ಸಿಮ್ ಬಳಸುತ್ತಿರುವ ಹಿನ್ನೆಲೆಯಲ್ಲಿ, ತುರ್ತು ಸಂದರ್ಭಗಳಲ್ಲಿ — ವಿಶೇಷವಾಗಿ ಆರೋಗ್ಯ ಸಮಸ್ಯೆ, ಸರ್ಕಾರಿ ಕಚೇರಿ ಸಂಪರ್ಕ ಹಾಗೂ ಕುಟುಂಬ ಸದಸ್ಯರ ನಡುವೆ ಸಂವಹನ ಕಷ್ಟಕರವಾಗಿದೆ.
“ಒಂದು ಕರೆ ಮಾಡಲು ಹಳ್ಳಿಯ ಹೊರವಲಯಕ್ಕೆ ಹೋಗಬೇಕಾಗುತ್ತದೆ. ತುರ್ತು ಪರಿಸ್ಥಿತಿಯಲ್ಲಿ ಸಹಾಯ ಪಡೆಯಲು ತುಂಬಾ ಕಷ್ಟ ಆಗುತ್ತಿದೆ,” ಎಂದು ಸ್ಥಳೀಯ ನಿವಾಸಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಒಂದೆಡೆ ಮೊಬೈಲ್ ನೆಟ್ವರ್ಕ್ ಇಲ್ಲದೇ ಬ್ಯಾಂಕ್ ವ್ಯವಹಾರಗಳು, ಆನ್‌ಲೈನ್ ಪಾವತಿಗಳು ಮತ್ತು ವಿದ್ಯಾರ್ಥಿಗಳ ಶಿಕ್ಷಣ ಸಂಬಂಧಿ ಕಾರ್ಯಗಳು ಅಸ್ತವ್ಯಸ್ತಗೊಂಡಿವೆ.
ಸ್ಥಳೀಯರು ಹಲವಾರು ಬಾರಿ ಬಿಎಸ್ಎನ್ಎಲ್ ಅಧಿಕಾರಿಗಳಿಗೆ ದೂರವಾಣಿ ಮತ್ತು ಲಿಖಿತ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗ್ರಾಮ ಪಂಚಾಯಿತಿ ಸದಸ್ಯರು, ವರ್ತಕರು ಹಾಗೂ ಆಟೋ ಸಂಘದವರು ಕೂಡ ತಕ್ಷಣ ನೆಟ್ವರ್ಕ್ ದೋಷ ಸರಿಪಡಿಸಿ ಸೇವೆ ಪುನಃ ಆರಂಭಿಸಲು ಸಂಬಂಧಿತ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
“ಸಾಮಾನ್ಯ ಜನರು ಅನುಭವಿಸುತ್ತಿರುವ ತೊಂದರೆ ಪರಿಗಣಿಸಿ ಬಿಎಸ್ಎನ್ಎಲ್ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು” ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು