10:28 PM Saturday27 - June 2026
ಬ್ರೇಕಿಂಗ್ ನ್ಯೂಸ್
ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:…

ಇತ್ತೀಚಿನ ಸುದ್ದಿ

BSNL problem | ಕೊಟ್ಟಿಗೆಹಾರದಲ್ಲಿ ಬಿಎಸ್ಸೆನ್ನೆಲ್ ನೆಟ್ವರ್ಕ್ ನಾಪತ್ತೆ: ಒಂದು ತಿಂಗಳಿಂದ ಜನ ಕಂಗಾಲು

27/10/2025, 17:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnata@gmail.com

ಕಳೆದ ಒಂದು ತಿಂಗಳಿಂದ ಕೊಟ್ಟಿಗೆಹಾರ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಬಿಎಸ್ಎನ್ಎಲ್ ಮೊಬೈಲ್ ನೆಟ್ವರ್ಕ್ ಸಂಪೂರ್ಣ ಸ್ಥಗಿತಗೊಂಡಿದ್ದು, ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಗ್ರಾಮೀಣ ಪ್ರದೇಶದ ಬಹುತೇಕ ಜನರು ಬಿಎಸ್ಎನ್ಎಲ್ ಸಿಮ್ ಬಳಸುತ್ತಿರುವ ಹಿನ್ನೆಲೆಯಲ್ಲಿ, ತುರ್ತು ಸಂದರ್ಭಗಳಲ್ಲಿ — ವಿಶೇಷವಾಗಿ ಆರೋಗ್ಯ ಸಮಸ್ಯೆ, ಸರ್ಕಾರಿ ಕಚೇರಿ ಸಂಪರ್ಕ ಹಾಗೂ ಕುಟುಂಬ ಸದಸ್ಯರ ನಡುವೆ ಸಂವಹನ ಕಷ್ಟಕರವಾಗಿದೆ.
“ಒಂದು ಕರೆ ಮಾಡಲು ಹಳ್ಳಿಯ ಹೊರವಲಯಕ್ಕೆ ಹೋಗಬೇಕಾಗುತ್ತದೆ. ತುರ್ತು ಪರಿಸ್ಥಿತಿಯಲ್ಲಿ ಸಹಾಯ ಪಡೆಯಲು ತುಂಬಾ ಕಷ್ಟ ಆಗುತ್ತಿದೆ,” ಎಂದು ಸ್ಥಳೀಯ ನಿವಾಸಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಒಂದೆಡೆ ಮೊಬೈಲ್ ನೆಟ್ವರ್ಕ್ ಇಲ್ಲದೇ ಬ್ಯಾಂಕ್ ವ್ಯವಹಾರಗಳು, ಆನ್‌ಲೈನ್ ಪಾವತಿಗಳು ಮತ್ತು ವಿದ್ಯಾರ್ಥಿಗಳ ಶಿಕ್ಷಣ ಸಂಬಂಧಿ ಕಾರ್ಯಗಳು ಅಸ್ತವ್ಯಸ್ತಗೊಂಡಿವೆ.
ಸ್ಥಳೀಯರು ಹಲವಾರು ಬಾರಿ ಬಿಎಸ್ಎನ್ಎಲ್ ಅಧಿಕಾರಿಗಳಿಗೆ ದೂರವಾಣಿ ಮತ್ತು ಲಿಖಿತ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗ್ರಾಮ ಪಂಚಾಯಿತಿ ಸದಸ್ಯರು, ವರ್ತಕರು ಹಾಗೂ ಆಟೋ ಸಂಘದವರು ಕೂಡ ತಕ್ಷಣ ನೆಟ್ವರ್ಕ್ ದೋಷ ಸರಿಪಡಿಸಿ ಸೇವೆ ಪುನಃ ಆರಂಭಿಸಲು ಸಂಬಂಧಿತ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
“ಸಾಮಾನ್ಯ ಜನರು ಅನುಭವಿಸುತ್ತಿರುವ ತೊಂದರೆ ಪರಿಗಣಿಸಿ ಬಿಎಸ್ಎನ್ಎಲ್ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು” ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು