5:03 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕೇರಳ ಪ್ರವಾಸಿ ಬಸ್ ಗಳಲ್ಲಿ ಡಿಜೆ ಅಳವಡಿಕೆ: ಶಬ್ದ ಮಾಲಿನ್ಯದ ವಿರುದ್ಧ ಆಕ್ಷೇಪ; ಪೊಲೀಸರಿಂದ 4 ಬಸ್ ಗಳಿಗೆ ದಂಡ

28/10/2025, 12:54

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೇರಳ ರಾಜ್ಯದಿಂದ ಪ್ರವಾಸಿಗರನ್ನು ಹೊತ್ತು ಕೊಡಗು ಜಿಲ್ಲೆಯ ಅನೇಕ ಸ್ಥಳಗಳಿಗೆ ಪ್ರತಿದಿನ 30ಕ್ಕೆ ಹೆಚ್ಚು ಪ್ರವಾಸಿ ಬಸುಗಳು ಕುಟ್ಟ ಗೇಟ್ ಮೂಲಕ, ಪೊನ್ನಂಪೇಟೆ ಗೋಣಿಕೊಪ್ಪ ತಿತಿಮತಿ ಪಟ್ಟಣಕ್ಕಾಗಿ ಕುಶಾಲನಗರ ಮೈಸೂರು ಜಿಲ್ಲೆಗೆ ಪ್ರವಾಸಕ್ಕೆ ತೆರಳುತ್ತಾರೆ.
ಈ ಬಸುಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸಿದ್ದು, ಹೆಚ್ಚಿನ ಶಬ್ದ ದೊಂದಿಗೆ ಕರ್ಕಶ ಸಂಗೀತದೊಂದಿಗೆ ಶಬ್ದ ಮಾಲಿನ್ಯ ಆಗುತ್ತಿರುವ ಬಗ್ಗೆ ಸಾರ್ವಜನಿಕರು ಒಬ್ಬರು ಇಂದು ಸಂಜೆ ವಿರಾಜಪೇಟೆ ಡಿ ವೈ ಎಸ್ ಪಿ ಅವರ ಗಮನಕ್ಕೆ ತಂದಾಗ, ಕೂಡಲೆ ಅವರು ಕಾರ್ಯಪ್ರವೃತ್ತರಾಗಿ, ಕುಟ್ಟ ಪೊಲೀಸ್ ಠಾಣೆಯಲ್ಲಿ ಈ ಪ್ರವಾಸಿ ಬಸುಗಳ ಮೇಲೆ ದಂಡ ವಿಧಿಸಿ ಸೂಕ್ತ ಎಚ್ಚರಿಕೆ ನೀಡಿ ಕಳುಹಿಸಿಕೊಡಲಾಗಿದೆ.


ಕೇರಳ ರಾಜ್ಯದಲ್ಲಿ ಧ್ವನಿವರ್ಧಕ ಹಾಗೂ ಬಣ್ಣ ಬಣ್ಣದ ವಿದ್ಯುತ್ ದೀಪಗಳನ್ನು ಬಸುಗಳಲ್ಲಿ ಅಳವಡಿಸಲು , ಹಾಗೆ ಬಣ್ಣ ಬಣ್ಣದ ಚಿತ್ರದಿಂದ ಅಲಂಕಾರ ಗೊಳಿಸುವುದನ್ನು ನಿಷೇಧಿಸಲಾಗಿದೆ. ಆದರೆ ಕೇರಳದ ಗಡಿ ದಾಟಿದ ತಕ್ಷಣ ಈ ಪ್ರವಾಸಿ ಬಸುಗಳಲ್ಲಿ ಧ್ವನಿವರ್ಧಕಗಳು ಮೊಳುಗುತ್ತವೆ, ಸಂಜೆಯಾಗುತ್ತಿದ್ದಂತೆ ಬಸ್ಸಿನಲ್ಲಿ ಬಣ್ಣ ಬಣ್ಣದ ದೀಪಗಳು ಹಾಕಿಕೊಂಡು ಹೆಚ್ಚಿನ ಶಬ್ದದ ಸಂಗೀತದೊಂದಿಗೆ ಕೊಡಗಿನ ಮೂಲಕ ಸಂಚರಿಸುತ್ತದೆ ಇದರಿಂದ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತಿದ್ದು ಈ ಬಗೆ, ಹಲವು ಬಾರಿ ಈ ಬಸುಗಳು ಹಾದು ಹೋಗುವ ಪೊಲೀಸ್ ಠಾಣೆಗೆ ಮೌಖಿಕವಾಗಿ ಹಲವರು ದೂರು ನೀಡಿದ್ದರೂ ಕೂಡ ಯಾವುದೇ ಕ್ರಮ ಕೈಗೊಳ್ಳದಿದ್ದಾಗ, ಆರ್. ಟಿ.ಓ.ಕಚೇರಿಯ ಇನ್ಸ್ಪೆಕ್ಟರ್ ಗೆ ಕೂಡ ಸಾರ್ವಜನಿಕರು ಮೌಕಿಕವಾಗಿ ಮಾಹಿತಿ ನೀಡಿದರು ಯಾವುದೇ ಕ್ರಮ ಕೈಗೊಳದಿರುವಾಗ, ಇಂದು ನೇರವಾಗಿ ಡಿ ವೈ.ಎಸ್. ಪಿ ಮಹೇಶ್ ಕುಮಾರ್ ರವರ ಗಮನಕ್ಕೆ ತಂದಾಗ ಸೂಕ್ತ ಕಾನೂನು ಕ್ರಮ ಕೈಗೊಂಡಿದ್ದಾರೆ. ಸಾರ್ವಜನಿಕರು ಡಿ. ವೈ ಎಸ್. ಪಿ ಅವರ ಕಾರ್ಯಕ್ಷಮತೆ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು