10:16 AM Thursday18 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಕೇರಳ ಪ್ರವಾಸಿ ಬಸ್ ಗಳಲ್ಲಿ ಡಿಜೆ ಅಳವಡಿಕೆ: ಶಬ್ದ ಮಾಲಿನ್ಯದ ವಿರುದ್ಧ ಆಕ್ಷೇಪ; ಪೊಲೀಸರಿಂದ 4 ಬಸ್ ಗಳಿಗೆ ದಂಡ

28/10/2025, 12:54

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೇರಳ ರಾಜ್ಯದಿಂದ ಪ್ರವಾಸಿಗರನ್ನು ಹೊತ್ತು ಕೊಡಗು ಜಿಲ್ಲೆಯ ಅನೇಕ ಸ್ಥಳಗಳಿಗೆ ಪ್ರತಿದಿನ 30ಕ್ಕೆ ಹೆಚ್ಚು ಪ್ರವಾಸಿ ಬಸುಗಳು ಕುಟ್ಟ ಗೇಟ್ ಮೂಲಕ, ಪೊನ್ನಂಪೇಟೆ ಗೋಣಿಕೊಪ್ಪ ತಿತಿಮತಿ ಪಟ್ಟಣಕ್ಕಾಗಿ ಕುಶಾಲನಗರ ಮೈಸೂರು ಜಿಲ್ಲೆಗೆ ಪ್ರವಾಸಕ್ಕೆ ತೆರಳುತ್ತಾರೆ.
ಈ ಬಸುಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸಿದ್ದು, ಹೆಚ್ಚಿನ ಶಬ್ದ ದೊಂದಿಗೆ ಕರ್ಕಶ ಸಂಗೀತದೊಂದಿಗೆ ಶಬ್ದ ಮಾಲಿನ್ಯ ಆಗುತ್ತಿರುವ ಬಗ್ಗೆ ಸಾರ್ವಜನಿಕರು ಒಬ್ಬರು ಇಂದು ಸಂಜೆ ವಿರಾಜಪೇಟೆ ಡಿ ವೈ ಎಸ್ ಪಿ ಅವರ ಗಮನಕ್ಕೆ ತಂದಾಗ, ಕೂಡಲೆ ಅವರು ಕಾರ್ಯಪ್ರವೃತ್ತರಾಗಿ, ಕುಟ್ಟ ಪೊಲೀಸ್ ಠಾಣೆಯಲ್ಲಿ ಈ ಪ್ರವಾಸಿ ಬಸುಗಳ ಮೇಲೆ ದಂಡ ವಿಧಿಸಿ ಸೂಕ್ತ ಎಚ್ಚರಿಕೆ ನೀಡಿ ಕಳುಹಿಸಿಕೊಡಲಾಗಿದೆ.


ಕೇರಳ ರಾಜ್ಯದಲ್ಲಿ ಧ್ವನಿವರ್ಧಕ ಹಾಗೂ ಬಣ್ಣ ಬಣ್ಣದ ವಿದ್ಯುತ್ ದೀಪಗಳನ್ನು ಬಸುಗಳಲ್ಲಿ ಅಳವಡಿಸಲು , ಹಾಗೆ ಬಣ್ಣ ಬಣ್ಣದ ಚಿತ್ರದಿಂದ ಅಲಂಕಾರ ಗೊಳಿಸುವುದನ್ನು ನಿಷೇಧಿಸಲಾಗಿದೆ. ಆದರೆ ಕೇರಳದ ಗಡಿ ದಾಟಿದ ತಕ್ಷಣ ಈ ಪ್ರವಾಸಿ ಬಸುಗಳಲ್ಲಿ ಧ್ವನಿವರ್ಧಕಗಳು ಮೊಳುಗುತ್ತವೆ, ಸಂಜೆಯಾಗುತ್ತಿದ್ದಂತೆ ಬಸ್ಸಿನಲ್ಲಿ ಬಣ್ಣ ಬಣ್ಣದ ದೀಪಗಳು ಹಾಕಿಕೊಂಡು ಹೆಚ್ಚಿನ ಶಬ್ದದ ಸಂಗೀತದೊಂದಿಗೆ ಕೊಡಗಿನ ಮೂಲಕ ಸಂಚರಿಸುತ್ತದೆ ಇದರಿಂದ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತಿದ್ದು ಈ ಬಗೆ, ಹಲವು ಬಾರಿ ಈ ಬಸುಗಳು ಹಾದು ಹೋಗುವ ಪೊಲೀಸ್ ಠಾಣೆಗೆ ಮೌಖಿಕವಾಗಿ ಹಲವರು ದೂರು ನೀಡಿದ್ದರೂ ಕೂಡ ಯಾವುದೇ ಕ್ರಮ ಕೈಗೊಳ್ಳದಿದ್ದಾಗ, ಆರ್. ಟಿ.ಓ.ಕಚೇರಿಯ ಇನ್ಸ್ಪೆಕ್ಟರ್ ಗೆ ಕೂಡ ಸಾರ್ವಜನಿಕರು ಮೌಕಿಕವಾಗಿ ಮಾಹಿತಿ ನೀಡಿದರು ಯಾವುದೇ ಕ್ರಮ ಕೈಗೊಳದಿರುವಾಗ, ಇಂದು ನೇರವಾಗಿ ಡಿ ವೈ.ಎಸ್. ಪಿ ಮಹೇಶ್ ಕುಮಾರ್ ರವರ ಗಮನಕ್ಕೆ ತಂದಾಗ ಸೂಕ್ತ ಕಾನೂನು ಕ್ರಮ ಕೈಗೊಂಡಿದ್ದಾರೆ. ಸಾರ್ವಜನಿಕರು ಡಿ. ವೈ ಎಸ್. ಪಿ ಅವರ ಕಾರ್ಯಕ್ಷಮತೆ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು