11:33 AM Saturday29 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಕಲ್ಲಚ್ಚು ಪ್ರಕಾಶನದ ರಜತ ರಂಗು: ನ.1ರಂದು ಕನ್ನಡ ಕಣ್ಮನಗಳ ಕಲರವ

30/10/2025, 18:09

ಮಂಗಳೂರು(reporterkarnataka.com): ಬೆಳ್ಳಿಹಬ್ಬ ” ರಜತ ರಂಗು” ಸಂಭ್ರಮದಲ್ಲಿರುವ ಮಂಗಳೂರಿನ ಕಲ್ಲಚ್ಚು ಪ್ರಕಾಶನದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ” ಕನ್ನಡ ಕಣ್ಮನಗಳ ಕಲರವ” ಸಮಾರಂಭ ನವಂಬರ್ 1ರಂದು ಸಂಜೆ 4.00 ಗಂಟೆಗೆ ನಗರದ ಹೋಟೆಲ್ ವುಡ್ ಲ್ಯಾಂಡ್ಸ್ ಸಭಾಂಗಣದಲ್ಲಿ ನಡೆಯಲಿದೆ.

ಈ ಸಂದರ್ಭದಲ್ಲಿ ಕಲ್ಲಚ್ಚು ರಾಜ್ಯೋತ್ಸವ ಪುರಸ್ಕಾರವನ್ನು ಪ್ರದೀಪ ನಾಯಕ್ ಮದ್ದಡ್ಕರವರಿಗೆ ಪ್ರದಾನ ಮಾಡಲಾಗುವುದು. ಹಿರಿಯ ಕವಿ ರಾಮಚಂದ್ರ ಬೈಕಂಪಾಡಿ ಉದ್ಘಾಟಿಸುವರು. ಉಪನ್ಯಾಸಕ ಕರುಣಾಕರ ಬಳ್ಕೂರು ರಾಜ್ಯೋತ್ಸವ ಸಂದೇಶ ನೀಡಲಿದ್ದು ಸಾಹಿತಿಗಳಾದ ಶಮೀಮ ಕುತ್ತಾರ್ ಮತ್ತು ಇಜಾಕ್ ಡಿಸೋಜಾ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕರಾವಳಿಯ ಹಿರಿ – ಕಿರಿ ಸಾಹಿತ್ಯ ಮತ್ತು ಪೂರಕ ಕ್ಷೇತ್ರದ ಅನೇಕ ಸಾಧಕರು ಮಾತು ಮಂಥನ, ಕಥೆ ಕವಿತೆಯಲ್ಲಿ ಪಾಲ್ಗೊಳ್ಳಲಿದ್ದು ಆಸಕ್ತರಿಗೆ ಮುಕ್ತ ಪ್ರವೇಶ ಇದೆ ಎಂದು ಸಾಹಿತಿ ಪ್ರಕಾಶಕ ಮಹೇಶ ಆರ್. ನಾಯಕ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು