4:46 AM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ ಮಹಿಳೆ ಗಂಭೀರ ಗಾಯ

31/10/2025, 22:23

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಪೊನ್ನಂಪೇಟೆಯಲ್ಲಿ ಬೆಳಿಗ್ಗೆ ಅಂಗನವಾಡಿಗೆ ತೆರಳುತ್ತಿದ್ದ ಮಗುವಿಗೆ ಬೀದಿ ನಾಯಿಯೊಂದು ಕಚ್ಚಿ ಗಾಯಗೊಳಿಸಿದ ಘಟನೆ ಬೆನ್ನಲ್ಲೇ ಇದೀಗ ಮತ್ತೊಂದು ಘಟನೆ ನಡೆದಿದೆ. ತೊರೆಬೀದಿಯಲ್ಲಿ ಸುನಿತಾ ಎಂಬುವರ ಪುತ್ರಿ ಸೌಮ್ಯ ಎಂಬವರಿಗೆ ನಾಯಿ ಕಾಲಿಗೆ ಕಚ್ಚಿ ಗಂಭೀರ ಗಾಯ ಉಂಟಾಗಿದೆ.
ಗಾಯಾಳು ಗೋಣಿಕೊಪ್ಪಲು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದಿದ್ದಾರೆ. ಪೊನ್ನಂಪೇಟೆಯಲ್ಲಿ ಮಿತಿಮೀರಿದ ಬೀದಿ ನಾಯಿಗಳು ಎಲ್ಲಾ ಮೀನು ಮತ್ತು ಮಾಂಸ ಅಂಗಡಿಗಳ ಮುಂಭಾಗ ರಾತ್ರಿ ಹೊತ್ತು ಕಾಣಿಸಿಕೊಳ್ಳುತ್ತಿದ್ದು, ಬೆಳಂಬೆಳ್ಳಗೆ ನಾಯಿಗಳೆಲ್ಲ ಆಹಾರ ಆರಿಸಿ ಪಟ್ಟಣದ ಬೀದಿಬೀದಿಗಳಲ್ಲಿ ಸಂಚರಿಸುವ ದೃಶ್ಯ ಸರ್ವೇಸಾಮಾನ್ಯವಾಗಿದೆ. ಪಟ್ಟಣ ಪಂಚಾಯಿತಿಗೆ ಮೌಖಿಕವಾಗಿ ಹಲವರು ದೂರು ನೀಡಿದ್ದರು ಕೂಡ ಯಾವುದೇ ರೀತಿಯ ಸ್ಪಂದನೆ ದೊರಕುತ್ತಿಲ್ಲ ಎಂದು ಹಲವು ಸಾರ್ವಜನಿಕರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು