4:37 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯ ರಾಜ್ಯೋತ್ಸವ ಪ್ರಶಸ್ತಿಗೆ 70 ಸಾಧಕರು ಮತ್ತು 24 ಸಂಸ್ಥೆಗಳು ಆಯ್ಕೆ ; ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ, ಪತ್ರಿಕಾ ಛಾಯಾಗ್ರಾಹಕ ಸತೀಶ್ ಇರಾ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರಿಗೆ ಗೌರವ

31/10/2025, 23:48

ಮಂಗಳೂರು(reporterkarnataka.com):2025ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟವಾಗಿದ್ದು, ವಿವಿಧ ಕ್ಷೇತ್ರಗಳಲ್ಲಿ ಮೆರೆದ ಸಾಧನೆಗಾಗಿ 70 ಮಂದಿ ಪ್ರತಿಭಾವಂತರನ್ನು ಹಾಗೂ 24 ಸಂಘ–ಸಂಸ್ಥೆಗಳನ್ನು ಆಯ್ಕೆ ಮಾಡಲಾಗಿದೆ.

ರಾಜ್ಯೋತ್ಸವದ ಅಂಗವಾಗಿ ಪ್ರತಿ ವರ್ಷ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ಈ ಗೌರವ ನೀಡಲಾಗುತ್ತದೆ. ಈ ಬಾರಿ ಆಯ್ಕೆಯಾದವರ ಪಟ್ಟಿ ವೈವಿಧ್ಯತೆಯಿಂದ ಕೂಡಿದ್ದು, ಕಲೆಯಿಂದ ಕ್ರೀಡೆವರೆಗೆ ಅನೇಕ ಕ್ಷೇತ್ರಗಳ ಸಾಧಕರಿಗೆ ಮಾನ್ಯತೆ ದೊರೆತಿದೆ.

ನೃತ್ಯ ಕ್ಷೇತ್ರದಲ್ಲಿ ರೆಮೋನಾ ಇವೆಟ್ ಪಿರೇರಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ, ಪತ್ರಿಕಾ ಛಾಯಾಗ್ರಾಹಕರು ಸತೀಶ್ ಇರಾ, ಎ.ಕೆ. ಕುಕ್ಕಿಲ ಹಾಗೂ ರಾಜೇಶ್ ದಡ್ಡಂಗಡಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಆಯ್ಕೆಯಾದರೆ, ಉದ್ಯಮ ಕ್ಷೇತ್ರದಲ್ಲಿ ಎಡಕ್ಕಾನ ಮಹಾಬಲೇಶ್ವರ ಭಟ್ ಅವರಿಗೆ ಗೌರವ ದೊರೆತಿದೆ.

ಸಮಾಜ ಸೇವೆ ವಿಭಾಗದಲ್ಲಿ ಅನಿವಾಸಿ ಭಾರತೀಯ ಪ್ರವೀಣ್ ಶೆಟ್ಟಿ ಪಿಲಾರು, ಮೊಹಮ್ಮದ್ ಮುಕ್ಕಚ್ಚೇರಿ ಹಾಗೂ ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆ ಅವರ ಸೇವೆಯನ್ನು ಗುರುತಿಸಲಾಗಿದೆ. ರಂಗಭೂಮಿ ಕ್ಷೇತ್ರದಲ್ಲಿ ಸುಂದರ ರೈ ಮಂದಾರ, ದೈವಾರಾಧನೆ ವಿಭಾಗದಲ್ಲಿ ಗಣೇಶ್ ಎಸ್., ಗೋಪಾಲ ಕೋಟ್ಯಾನ್ ಹಾಗೂ ಸುರೇಂದ್ರ ಪರವ ಅವರು ರಾಜ್ಯೋತ್ಸವ ಪುರಸ್ಕೃತರಾಗಿದ್ದಾರೆ.


ಸಂಗೀತ ವಿಭಾಗದಲ್ಲಿ ಸ್ಯಾಕ್ಸೋಫೋನ್ ವಾದಕ ಬಾಬು ಸಪಲ್ಯ ಹಾಗೂ ನಾಟಿವೈದ್ಯ ವಿಭಾಗದಲ್ಲಿ ಸೋಮನಾಥ ಪಂಡಿತ್ ಅವರನ್ನು ಆಯ್ಕೆ ಮಾಡಲಾಗಿದೆ. ಕಂಬಳ ಕ್ಷೇತ್ರದಲ್ಲಿ ಸತೀಶ್ ದೇವಾಡಿಗ ಅಳದಂಗಡಿ, ಕೃಷಿ ಆಧಾರಿತ ಉದ್ಯಮದಲ್ಲಿ ಅವಿನಾಶ್ ರಾವ್, ಧಾರ್ಮಿಕ ಸೇವೆಯಲ್ಲಿ ಕುಕ್ಕಾಡಿ ಪ್ರೀತಂ ತಂತ್ರಿ, ಕ್ರೀಡಾ ಕ್ಷೇತ್ರದಲ್ಲಿ ಅಶೋಕ್ ಪೂವಯ್ಯ, ರಾಮಣ್ಣ ಗೌಡ ಪಡೀಲ್, ಬಾಲಕೃಷ್ಣ ರೈ, ಜೋಯ್ದಿನ್ ಲೋಬೋ ಮುಂತಾದ ಸಾಧಕರು ಸ್ಥಾನ ಪಡೆದಿದ್ದಾರೆ.

ಜಿಲ್ಲಾ ಮಟ್ಟದ ಪ್ರಶಸ್ತಿಗೆ 24 ಸಂಘ–ಸಂಸ್ಥೆಗಳನ್ನೂ ಆಯ್ಕೆ ಮಾಡಲಾಗಿದ್ದು, ಅವುಗಳಲ್ಲಿ ಉಳ್ಳಾಲ ಮತ್ತು ಮಂಗಳೂರು ನಗರ ಭಾಗದ ಸಂಸ್ಥೆಗಳ ಸಂಖ್ಯೆ ಹೆಚ್ಚಿನದು.


ರಾಜ್ಯೋತ್ಸವ ದಿನದಂದು ಈ ಸಾಧಕರಿಗೆ ಜಿಲ್ಲಾ ಆಡಳಿತ ವತಿಯಿಂದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸನ್ಮಾನಿಸಲಿರುವುದಾಗಿ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು