10:27 AM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

Mangaluru | ಕ್ರೈಸ್ತರಿಂದ ಚರ್ಚ್ ಮತ್ತು ಸಿಮೆಟರಿ ಗಳಲ್ಲಿ ವಿಶೇಷ ಪ್ರಾರ್ಥನೆ

02/11/2025, 20:05

ಮಂಗಳೂರು(reporterkarnataka.com): ಕ್ರೈಸ್ತರು ನವೆಂಬರ್ 2ರಂದು ತಮ್ಮ ಕುಟುಂಬಗಳ ಮೃತ ಸದಸ್ಯರನ್ನು ಸ್ಮರಿಸಿ ಅವರ ಆತ್ಮಗಳಿಗೆ ಸದ್ಗತಿ ಲಭಿಸಲು ದೇವರ ಕರುಣೆ ಮತ್ತು ಅನುಗ್ರಹ ಕೋರಿ ಚರ್ಚ್ ಹಾಗೂ ಸಿಮೆಟರಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಮಂಗಳೂರಿನ ಕುಲಶೇಖರ, ಪಾಲ್ದನೆ ಮತ್ತು ಶಕ್ತಿನಗರ ಚರ್ಚ್ ಗಳಿಗೆ ಕುಲಶೇಖರ ಚರ್ಚ್ ಸಿಮೆಟರಿಯೇ ಅಧಿಕೃತ ಸಿಮೆಟರಿ ಆಗಿದ್ದು,ಇಂದು ಈ ಮೂರು ಚರ್ಚ್ ಗಳ ಕ್ರೈಸ್ತರು ಕುಲಶೇಖರ ಚರ್ಚ್ ಗೆ ತೆರಳಿ ಅಲ್ಲಿನ ಸಿಮೆಟರಿಯಲ್ಲಿ ವಿಶೇಷ ಪ್ರಾರ್ಥನೆ ನಡೆಸಿದರು.

ಕುಲಶೇಖರ ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ಕ್ಲಿಫರ್ಡ್ ಫೆರ್ನಾಂಡಿಸ್ ಮತ್ತು ಪಾಲ್ದನೆ ಸಂತ ತೆರೆಸಾ ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರ ನೇತೃತ್ವದಲ್ಲಿ ಪ್ರಾರ್ಥನೆ ನೆರವೇರಿತು. ಪವಿತ್ರ ಜಲ ಸಿಂಪರಣೆ ಮಾಡಿ ಸಮಾಧಿಗಳನ್ನು ಆಶೀರ್ವದಿಸಿದರು. ಸಮಾಧಿ ಸ್ಥಳವನ್ನು ಸ್ವಚ್ಛಗೊಳಿಸಿ ಮೇಣದ ಬತ್ತಿಗಳನ್ನು ಉರಿಸಿ ಪ್ರಾರ್ಥನೆಗೆ ಅಣಿಗೊಳಿಸಲಾಗಿತ್ತು.
ಇದೇ ಸಂದರ್ಭದಲ್ಲಿ ಕುಲಶೇಖರ ಚರ್ಚ್ ನ ಸಿಮೆಟರಿಯಲ್ಲಿ ನೂತನವಾಗಿ ಸ್ಥಾಪಿಸಿದ ಪವಿತ್ರ ಶಿಲುಬೆಯ ಆಶೀರ್ವಾದ ಕೂಡಾ ನೆರವೇರಿತು. ಮೂರೂ ಚರ್ಚ್ ಗಳ ಕ್ರೈಸ್ತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು