12:01 AM Sunday2 - November 2025
ಬ್ರೇಕಿಂಗ್ ನ್ಯೂಸ್
ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:… ಸಂವಿಧಾನ ರಕ್ಷಣೆ | ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ:… ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದ ಕೇಂದ್ರ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು:… Kodagu | ಮಡಿಕೇರಿ: 15 ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಕಾಡಿನಲ್ಲಿ ಪತ್ತೆ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡುವುದಿಲ್ಲ: ಮಾಜಿ ಸಚಿವ ರೇಣುಕಾಚಾರ್ಯ ಭವಿಷ್ಯ

ಇತ್ತೀಚಿನ ಸುದ್ದಿ

Mangaluru | ಕ್ರೈಸ್ತರಿಂದ ಚರ್ಚ್ ಮತ್ತು ಸಿಮೆಟರಿ ಗಳಲ್ಲಿ ವಿಶೇಷ ಪ್ರಾರ್ಥನೆ

02/11/2025, 20:05

ಮಂಗಳೂರು(reporterkarnataka.com): ಕ್ರೈಸ್ತರು ನವೆಂಬರ್ 2ರಂದು ತಮ್ಮ ಕುಟುಂಬಗಳ ಮೃತ ಸದಸ್ಯರನ್ನು ಸ್ಮರಿಸಿ ಅವರ ಆತ್ಮಗಳಿಗೆ ಸದ್ಗತಿ ಲಭಿಸಲು ದೇವರ ಕರುಣೆ ಮತ್ತು ಅನುಗ್ರಹ ಕೋರಿ ಚರ್ಚ್ ಹಾಗೂ ಸಿಮೆಟರಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಮಂಗಳೂರಿನ ಕುಲಶೇಖರ, ಪಾಲ್ದನೆ ಮತ್ತು ಶಕ್ತಿನಗರ ಚರ್ಚ್ ಗಳಿಗೆ ಕುಲಶೇಖರ ಚರ್ಚ್ ಸಿಮೆಟರಿಯೇ ಅಧಿಕೃತ ಸಿಮೆಟರಿ ಆಗಿದ್ದು,ಇಂದು ಈ ಮೂರು ಚರ್ಚ್ ಗಳ ಕ್ರೈಸ್ತರು ಕುಲಶೇಖರ ಚರ್ಚ್ ಗೆ ತೆರಳಿ ಅಲ್ಲಿನ ಸಿಮೆಟರಿಯಲ್ಲಿ ವಿಶೇಷ ಪ್ರಾರ್ಥನೆ ನಡೆಸಿದರು.

ಕುಲಶೇಖರ ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ಕ್ಲಿಫರ್ಡ್ ಫೆರ್ನಾಂಡಿಸ್ ಮತ್ತು ಪಾಲ್ದನೆ ಸಂತ ತೆರೆಸಾ ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರ ನೇತೃತ್ವದಲ್ಲಿ ಪ್ರಾರ್ಥನೆ ನೆರವೇರಿತು. ಪವಿತ್ರ ಜಲ ಸಿಂಪರಣೆ ಮಾಡಿ ಸಮಾಧಿಗಳನ್ನು ಆಶೀರ್ವದಿಸಿದರು. ಸಮಾಧಿ ಸ್ಥಳವನ್ನು ಸ್ವಚ್ಛಗೊಳಿಸಿ ಮೇಣದ ಬತ್ತಿಗಳನ್ನು ಉರಿಸಿ ಪ್ರಾರ್ಥನೆಗೆ ಅಣಿಗೊಳಿಸಲಾಗಿತ್ತು.
ಇದೇ ಸಂದರ್ಭದಲ್ಲಿ ಕುಲಶೇಖರ ಚರ್ಚ್ ನ ಸಿಮೆಟರಿಯಲ್ಲಿ ನೂತನವಾಗಿ ಸ್ಥಾಪಿಸಿದ ಪವಿತ್ರ ಶಿಲುಬೆಯ ಆಶೀರ್ವಾದ ಕೂಡಾ ನೆರವೇರಿತು. ಮೂರೂ ಚರ್ಚ್ ಗಳ ಕ್ರೈಸ್ತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು