3:07 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

Mangaluru | ಕ್ರೈಸ್ತರಿಂದ ಚರ್ಚ್ ಮತ್ತು ಸಿಮೆಟರಿ ಗಳಲ್ಲಿ ವಿಶೇಷ ಪ್ರಾರ್ಥನೆ

02/11/2025, 20:05

ಮಂಗಳೂರು(reporterkarnataka.com): ಕ್ರೈಸ್ತರು ನವೆಂಬರ್ 2ರಂದು ತಮ್ಮ ಕುಟುಂಬಗಳ ಮೃತ ಸದಸ್ಯರನ್ನು ಸ್ಮರಿಸಿ ಅವರ ಆತ್ಮಗಳಿಗೆ ಸದ್ಗತಿ ಲಭಿಸಲು ದೇವರ ಕರುಣೆ ಮತ್ತು ಅನುಗ್ರಹ ಕೋರಿ ಚರ್ಚ್ ಹಾಗೂ ಸಿಮೆಟರಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಮಂಗಳೂರಿನ ಕುಲಶೇಖರ, ಪಾಲ್ದನೆ ಮತ್ತು ಶಕ್ತಿನಗರ ಚರ್ಚ್ ಗಳಿಗೆ ಕುಲಶೇಖರ ಚರ್ಚ್ ಸಿಮೆಟರಿಯೇ ಅಧಿಕೃತ ಸಿಮೆಟರಿ ಆಗಿದ್ದು,ಇಂದು ಈ ಮೂರು ಚರ್ಚ್ ಗಳ ಕ್ರೈಸ್ತರು ಕುಲಶೇಖರ ಚರ್ಚ್ ಗೆ ತೆರಳಿ ಅಲ್ಲಿನ ಸಿಮೆಟರಿಯಲ್ಲಿ ವಿಶೇಷ ಪ್ರಾರ್ಥನೆ ನಡೆಸಿದರು.

ಕುಲಶೇಖರ ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ಕ್ಲಿಫರ್ಡ್ ಫೆರ್ನಾಂಡಿಸ್ ಮತ್ತು ಪಾಲ್ದನೆ ಸಂತ ತೆರೆಸಾ ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರ ನೇತೃತ್ವದಲ್ಲಿ ಪ್ರಾರ್ಥನೆ ನೆರವೇರಿತು. ಪವಿತ್ರ ಜಲ ಸಿಂಪರಣೆ ಮಾಡಿ ಸಮಾಧಿಗಳನ್ನು ಆಶೀರ್ವದಿಸಿದರು. ಸಮಾಧಿ ಸ್ಥಳವನ್ನು ಸ್ವಚ್ಛಗೊಳಿಸಿ ಮೇಣದ ಬತ್ತಿಗಳನ್ನು ಉರಿಸಿ ಪ್ರಾರ್ಥನೆಗೆ ಅಣಿಗೊಳಿಸಲಾಗಿತ್ತು.
ಇದೇ ಸಂದರ್ಭದಲ್ಲಿ ಕುಲಶೇಖರ ಚರ್ಚ್ ನ ಸಿಮೆಟರಿಯಲ್ಲಿ ನೂತನವಾಗಿ ಸ್ಥಾಪಿಸಿದ ಪವಿತ್ರ ಶಿಲುಬೆಯ ಆಶೀರ್ವಾದ ಕೂಡಾ ನೆರವೇರಿತು. ಮೂರೂ ಚರ್ಚ್ ಗಳ ಕ್ರೈಸ್ತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು