7:29 PM Tuesday17 - March 2026
ಬ್ರೇಕಿಂಗ್ ನ್ಯೂಸ್
Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ… ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ

ಇತ್ತೀಚಿನ ಸುದ್ದಿ

Mangaluru | ಪಾಲ್ದನೆ ಚರ್ಚ್ ನಲ್ಲಿ ಐಸಿವೈಎಂ ವತಿಯಿಂದ ಯುವೋತ್ಸವ

04/11/2025, 18:42

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನ ಯುವಕರ ಸಂಘಟನೆ ಐ.ಸಿ. ವೈ. ಎಂ. ವತಿಯಿಂದ ಯುವೋತ್ಸವ ಕಾರ್ಯಕ್ರಮ ನಡೆಯಿತು.
ಚರ್ಚ್ ಪಾಲನಾ ಸಮಿತಿಯ ಸದಸ್ಯೆ ಹಾಗೂ ಆಧ್ಯಾತ್ಮಿಕ ಸಮಿತಿಯ ಸಂಚಾಲಕಿ ಪ್ರೆಸಿಲ್ಲಾ ಫೆರ್ನಾಂಡಿಸ್ (ಪ್ರೆಸ್ಸಿ)ಅವರು ಮುಖ್ಯ ಅತಿಥಿಯಾಗಿದ್ದರು. ಅವರು ಮಾತನಾಡಿ ಯುವ ಶಕ್ತಿಯು ಅದ್ಭುತ ಶಕ್ತಿಯಾಗಿದೆ. ಸಮುದಾಯ, ಸಮಾಜ ಮತ್ತು ದೇಶದಲ್ಲಿ ಯುವಜನರು ಇದ್ದಲ್ಲಿ , ಯಾವುದೇ ಕೆಲಸಗಳು ಕಷ್ಟವಿಲ್ಲದೆ ನಡೆಯುತ್ತವೆ. ಯುವಜನರು ಒಂದಾಗಿ ಒಳ್ಳೆಯ ಉದ್ದೇಶಕ್ಕಾಗಿ ತಮ್ಮ ಶಕ್ತಿಯನ್ನು ವಿನಿಯೋಗಿಸಿದರೆ ಸಮೃದ್ಧಿಯು ನೆಲೆ ಕಾಣುತ್ತದೆ. ಈ ನಿಟ್ಟಿನಲ್ಲಿ ಪಾಲ್ದನೆ ಚರ್ಚ್ ನ ಐ.ಸಿ.ವೈ.ಎಂ. ಸಂಘಟನೆ ನಂಬರ್ ವನ್ ಆಗಿದೆ ಎಂದರು.
ಇದೇ ಸಂದರ್ಭದಲ್ಲಿ ಪ್ರೆಸಿಲ್ಲಾ ಫೆರ್ನಾಂಡಿಸ್‌ ಅವರನ್ನು ಅವರು ನೀಡುತ್ತಿರುವ ವಿವಿಧ ಸೇವೆಗಾಗಿ ಫಲ ಪುಷ್ಪಗಳನ್ನಿತ್ತು ಐಸಿವೈಎಂ ವತಿಯಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರು ಶುಭ ಹಾರೈಸಿದರು. ವಂದನೀಯ ಫಾ. ಅಶ್ವಿನ್ ಕಾರ್ಡೋಜಾ ಮತ್ತು ವಂದನೀಯ ಫಾ. ಲಾರೆನ್ಸ್ ಕುಟಿನ್ಹಾ ಕಾರ್ಯಕ್ರಮಕ್ಕೆ ಸಹಕರಿಸಿದರು.

ಐ.ಸಿ.ವೈ.ಎಂ. ಸಿಟಿ ವಲಯದ ಅಧ್ಯಕ್ಷ ರಾಯನ್ ನೊರೊನ್ಹಾ, ಐ.ಸಿ.ವೈ.ಎಂ. ಪಾಲ್ದನೆ ಘಟಕದ ಅಧ್ಯಕ್ಷರಾದ ವಿಲೀಶಾ ಬ್ರ್ಯಾಗ್ಸ್, ಕಾರ್ಯದರ್ಶಿ ಮಿಶೆಲ್ ಲೋಬೊ, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ಐ.ಸಿ.ವೈ.ಎಂ. ಸಂಚಾಲಕ ಹಾಗೂ ಮದರ್ ತೆರೆಸಾ ವಾರ್ಡ್ ನ ಮುಖ್ಯಸ್ಥ ರೋಶನ್ ಮೊಂತೇರೊ ಉಪಸ್ಥಿತರಿದ್ದರು. ಸಂಘಟನೆಯ ಸದಸ್ಯರು ವಿವಿಧ ವಿನೋದಾವಳಿಗಳನ್ನು ಪ್ರಸ್ತುತ ಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು