12:40 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ವಿದ್ಯಾರ್ಥಿಗಳ ಕೊರತೆ: ಮಂಗಳೂರು ವಿವಿಯಲ್ಲಿ 4 ಪಿಜಿ ಕೋರ್ಸ್ ತಾತ್ಕಾಲಿಕ ಸ್ಥಗಿತ

05/11/2025, 21:07

ಮಂಗಳೂರು(reporterkarnataka.com): ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯಲ್ಲಿ ಈ ಬಾರಿ ನಾಲ್ಕು ಪಿಜಿ ವಿಭಾಗಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕುಲಪತಿ ಪ್ರೊ. ಪಿ.ಎಲ್. ಧರ್ಮ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಸಂಖ್ಯಾಶಾಸ್ತ್ರ, ಎಚ್‌ಆರ್‌ಡಿ, ಎಂಸಿಜೆ (ಪತ್ರಿಕೋದ್ಯಮ),ಎಲೆಕ್ಟ್ರಾನಿಕ್ಸ್ ವಿಭಾಗಗಳಿಗೆ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದ್ದರಿಂದ ಈ ವರ್ಷಕ್ಕೆ ಮಾತ್ರ ಅನ್ವಯಿಸುವಂತೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದರು.
ಎಂಸಿಜೆ ವಿಭಾಗಕ್ಕೆ ಕೇವಲ ಒಬ್ಬ ವಿದ್ಯಾರ್ಥಿ ಅರ್ಜಿ ಸಲ್ಲಿಸಿದ್ದರು. ವಿಭಾಗವನ್ನು ನಡೆಸಲು ಕನಿಷ್ಠ ೧೦-೧೫ ವಿದ್ಯಾರ್ಥಿಗಳಾದರೂ ಬೇಕು. ಈ ಕುರಿತು ವಿದ್ಯಾರ್ಥಿಗೆ ಆಡಳಿತಾತ್ಮಕ ಸಮಜಾಯಿಷಿಕೆ ನೀಡಲಾಗಿದೆ ಎಂದು ತಿಳಿಸಿದರು.
ವಿವಿಗೆ ಪಂಚಾಯ್ತಿಯಿಂದ ಕಂದಾಯ ವಿಧಿಸುವ ವಿಚಾರದ ಕುರಿತು ಪ್ರತಿಕ್ರಿಯಿಸಿ, ವಾಣಿಜ್ಯ ಉದ್ದೇಶಗಳಿಗೆ ಬಳಕೆ ಮಾಡಲಾಗುವ ಕಟ್ಟಡಗಳಿಗೆ ಮಾತ್ರ ಕಂದಾಯ ವಿಧಿಸಬಹುದೇ ಹೊರತು ಸೇವಾ ವಿಭಾಗಗಳಿಗೆ ವಿಧಿಸಬಾರದು. ಈ ಕುರಿತು ಸ್ಪೀಕರ್ ಅವರ ಬಳಿ ಮಾತುಕತೆ ನಡೆಸಲಾಗಿದೆ. ಸರಿಯಾಗಿ ಕಂದಾಯ ಲೆಕ್ಕಾಚಾರ ನಡೆದ ಬಳಿಕ ಮುಂದಿನ ಹಂತದಲ್ಲಿ ಅದನ್ನು ಕಟ್ಟಲು ಕ್ರಮ ಕೈಗೊಳ್ಳಲಾಗುವುದು ಎಂದು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು