10:58 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಬಿ.ಸಿ.ರೋಡ್: ನವೆಂಬರ್ 9ರಂದು ಗುರುವಂದನಾ,ವಿದ್ಯಾರ್ಥಿ ವೇತನ ವಿತರಣೆ

07/11/2025, 10:57

ಬಂಟ್ವಾಳ( reporterkarnataka.com): ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ನವೆಂಬರ್ 9ರಂದು ಬೆಳಗ್ಗೆ ಗಂಟೆ 9ರಿಂದ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ “ಗುರುವಂದನಾ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ನಡೆಯಲಿದೆ
ಬಂಟ್ವಾಳ ತಾಲೂಕಿನ ಬಿಲ್ಲವ ಸಮುದಾಯದ ಸರಕಾರಿ ಹಾಗೂ ಸರಕಾರೇತರ ಪ್ರಾಥಮಿಕ, ಪ್ರೌಢಶಾಲಾ, ಪದವಿಪೂರ್ವ ಕಾಲೇಜು, ಪದವಿ ಕಾಲೇಜು, ಸ್ನಾತಕೋತ್ತರ, ತಾಂತ್ರಿಕ, ವೈದ್ಯಕೀಯ ವಿಭಾಗದ ಒಟ್ಟು 225
ಬೋಧಕ-ಬೋಧಕಿಯರಿಗೆ “ಬಿಲ್ಲವ ಗುರುವಂದನಾ ಗೌರವಾಭಿನಂದನೆ” ಹಾಗೂ ಜಿಲ್ಲಾ, ರಾಜ್ಯ ರಾಷ್ಟ್ರ ಮಟ್ಟದ ಸಾಧಕ ಗುರುಗಳಿಗೆ ” ಬಿಲ್ಲವ ಗುರುವಂದನಾ ಪುರಸ್ಕಾರ ” ಪ್ರದಾನ ಮಾಡಲಾಗುವುದು.
*ವಿದ್ಯಾರ್ಥಿ ವೇತನ ವಿತರಣೆ:* ಬಂಟ್ವಾಳ ತಾಲೂಕಿನ ಸ್ಥಾತಕೋತ್ತರ, ತಾಂತ್ರಿಕ, ವೈದ್ಯಕೀಯದ ಅರ್ಹ 100
ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಸುಮಾರು‌ ₹5 ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಣೆ ನಡೆಯಲಿದೆ
*ಉದ್ಘಾಟನಾ ಸಮಾರಂಭ:* ಮಂಗಳೂರಿನ ಡಯಟ್ ಸೆಂಟರ್‌ನ ಹಿರಿಯ ಉಪನ್ಯಾಸಕರಾದ
ಡಾ. ತ್ರಿವೇಣಿ ಸಮಾರಂಭ ಉದ್ಘಾಟಿಸಲಿದ್ದಾರೆ
ಖ್ಯಾತ ಎಲಬು ತಜ್ಞರಾದ
ಡಾ. ಸಂತೋಷ್ ಬಾಬು, ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಚಂದ್ರಶೇಖರ ಪೂಜಾರಿ, ಉದ್ಯಮಿ ಓಂಪ್ರಸಾದ್ ಬಾರ್ದಿಲ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ
ಸಮುದಾಯ ಹಾಗೂ ಸಂಘಟನೆ ಎಂಬ ವಿಚಾರದ ಬಗ್ಗೆ ಆಪ್ತ ಸಮಾಲೋಚಕರಾದ ಸ್ಕಿತೇಶ್ ಎಸ್ ಬಾರ್ಯ ಉಪನ್ಯಾಸ ನೀಡಲಿದ್ದಾರೆ
ಬಳಿಕ‌ ನಡೆಯುವ ಸಮಾರೋಪ ಸಮಾರಂಭದಲ್ಲಿ ಮೂತ್ರ ರೋಗ ತಜ್ಞರಾದ
ಡಾ. ಸದಾನಂದ ಪೂಜಾರಿ, ಅಖಿಲ ಭಾರತ ಬಿಲ್ಲವರ ಯೂನಿಯಾನ್ ಅಧ್ಯಕ್ಷ ನವೀನ್‌ಚಂದ್ರ ಡಿ ಸುವರ್ಣ, ಕೆದ್ದೇಲುಗುತ್ತು
ಶ್ರೀ ನಾಲ್ಕೆತ್ತಾಯ ಪಂಜುರ್ಲಿ ಜೀರ್ಣೋದ್ಧಾರ ಸಮಿತಿ, ಅಧ್ಯಕ್ಷ ಜಗನ್ನಾಥ ಬಂಗೇರ ನಿರ್ಮಲ್‌, ಬಿರುವೆ‌ರ್ ಕುಡ್ಗ ಸ್ಥಾಪಕಾಧ್ಯಕ್ಷ ಉದಯ್ ಪೂಜಾರಿ ಬಳ್ಳಾಲ್‌ ಭಾಗ್, ಉದ್ಯಮಿ ದಿನೇಶ್ ಎಂ.ಪಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಬಂಟ್ವಾಳ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಭುವನೇಶ್‌ ಪಚ್ಚಿನಡ್ಕ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಪೂಜಾರಿ ಮೆಲ್ಕಾರ್ ಪತ್ರಕಾ ಗೋಷ್ಠಿಯಲ್ಲಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಭುವನೇಶ್‌ ಪಚ್ಚಿನಡ್ಕ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಪೂಜಾರಿ ಮೆಲ್ಕಾರ್, ಉಪಾಧ್ಯಕ್ಷ ಜಯಪ್ರಕಾಶ್ ಜೆ.ಎಸ್. ಕೋಶಾಧಿಕಾರಿ ಸುನೀಲ್ ಎನ್ ಕುಂದರ್, ಆಂತರಿಕ ಲೆಕ್ಕ ಪರಿಶೋಧಕ ಪ್ರಶಾಂತ್ ಕೋಟ್ಯಾನ್, ಜತೆ ಕಾರ್ಯದರ್ಶಿ ಆನಂದ ಸಾಲ್ಯಾನ್ ಶಂಬೂರು, ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು