1:13 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಬೆಳ್ತಂಗಡಿ ಮೋಸ್ಟ್ ಹೋಲಿ ರೆಡೀಮರ್ ಚರ್ಚ್ ನಲ್ಲಿ ಹಿರಿಯ ನಾಗರಿಕರ ದಿನಾಚರಣೆ

09/11/2025, 11:47

ಬೆಳ್ತಂಗಡಿ(reporterkarnataka.com): ಹಿರಿಯ ವಯಸ್ಸು ಶಾಪವಲ್ಲ. ಅದೊಂದು ವರ. ಹಿರಿಯರು ನಮ್ಮ ಸಮಾಜಕ್ಕೆ ನೀಡಿರುವ ಕೊಡುಗೆಗಳನ್ನು ಗುರುತಿಸುವುದು, ಅವರ ಯೋಗ ಕ್ಷೇಮಕ್ಕೆ ಆದ್ಯತೆ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ನಿವೃತ್ತ ಶಿಕ್ಷಕ ಹಾಗೂ ಆಳ್ವಾಸ್ ಎಜುಕೇಶನಲ್ ಟ್ರಸ್ಟ್ ನ ಮಾಜಿ ಆಡಳಿತಾಧಿಕಾರಿ ಎಲ್.
ಜೆ. ಫೆರ್ನಾಂಡಿಸ್ ವೇಣೂರು ಅವರು ಹೇಳಿದರು.

ಅವರು ಬೆಳ್ತಂಗಡಿಯ ಮೋಸ್ಟ್ ಹೋಲಿ ರೆಡೀಮರ್ ಚರ್ಚ್ ನ ಸೆಕ್ಯುಲರ್ ಫ್ರಾನ್ಸಿಸ್ಕನ್ ಸಂಸ್ಥೆಯು ಆಯೋಜಿಸಿದ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಚರ್ಚ್ ನ ಧರ್ಮಗುರು ವಂದನೀಯ ಫಾ. ವಾಲ್ಟರ್ ಡಿಮೆಲ್ಲೊ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಎಲಿಜ್ ಸಿಕ್ವೇರಾ, ವಂದನೀಯ ಫಾ. ಕ್ಲಿಫರ್ಡ್ ಪಿಂಟೊ, ಸಂಘದ ವಲಯ ಅಧ್ಯಕ್ಷ ಸಿಪ್ರಿಯನ್ ಫೆರ್ನಾಂಡಿಸ್, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ವಾಲ್ಟರ್ ಮೋನಿಸ್ ಮತ್ತು ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
ನಿವೃತ್ತ ಶಿಕ್ಷಕಿ ಎಲಿಜಾ ಫೆರ್ನಾಂಡಿಸ್ ಶುಭ ಹಾರೈಸಿದರು.
ಸಂಘದ ಅಧ್ಯಕ್ಷ ಫ್ರಾನ್ಸಿಸ್ ಮಿರಾಂಡಾ ಸ್ವಾಗತಿಸಿದರು. ಕಾರ್ಯದರ್ಶಿ ಕಾಲಿಸ್ತ್ ಡಿ ಸೋಜಾ ವಂದಿಸಿದರು. ಬೆನೆಡಿಕ್ಟ್ ಮಾರ್ಟಿಸ್ ಕಾರ್ಯಕ್ರಮ ನಿರೂಪಿಸಿದರು. ಭಾಗವಹಿಸಿದ್ದ ಎಲ್ಲಾ ಹಿರಿಯ ನಾಗರಿಕರನ್ನು ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು