4:02 PM Tuesday17 - March 2026
ಬ್ರೇಕಿಂಗ್ ನ್ಯೂಸ್
ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ… ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,…

ಇತ್ತೀಚಿನ ಸುದ್ದಿ

ಬೆಳ್ತಂಗಡಿ ಮೋಸ್ಟ್ ಹೋಲಿ ರೆಡೀಮರ್ ಚರ್ಚ್ ನಲ್ಲಿ ಹಿರಿಯ ನಾಗರಿಕರ ದಿನಾಚರಣೆ

09/11/2025, 11:47

ಬೆಳ್ತಂಗಡಿ(reporterkarnataka.com): ಹಿರಿಯ ವಯಸ್ಸು ಶಾಪವಲ್ಲ. ಅದೊಂದು ವರ. ಹಿರಿಯರು ನಮ್ಮ ಸಮಾಜಕ್ಕೆ ನೀಡಿರುವ ಕೊಡುಗೆಗಳನ್ನು ಗುರುತಿಸುವುದು, ಅವರ ಯೋಗ ಕ್ಷೇಮಕ್ಕೆ ಆದ್ಯತೆ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ನಿವೃತ್ತ ಶಿಕ್ಷಕ ಹಾಗೂ ಆಳ್ವಾಸ್ ಎಜುಕೇಶನಲ್ ಟ್ರಸ್ಟ್ ನ ಮಾಜಿ ಆಡಳಿತಾಧಿಕಾರಿ ಎಲ್.
ಜೆ. ಫೆರ್ನಾಂಡಿಸ್ ವೇಣೂರು ಅವರು ಹೇಳಿದರು.

ಅವರು ಬೆಳ್ತಂಗಡಿಯ ಮೋಸ್ಟ್ ಹೋಲಿ ರೆಡೀಮರ್ ಚರ್ಚ್ ನ ಸೆಕ್ಯುಲರ್ ಫ್ರಾನ್ಸಿಸ್ಕನ್ ಸಂಸ್ಥೆಯು ಆಯೋಜಿಸಿದ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಚರ್ಚ್ ನ ಧರ್ಮಗುರು ವಂದನೀಯ ಫಾ. ವಾಲ್ಟರ್ ಡಿಮೆಲ್ಲೊ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಎಲಿಜ್ ಸಿಕ್ವೇರಾ, ವಂದನೀಯ ಫಾ. ಕ್ಲಿಫರ್ಡ್ ಪಿಂಟೊ, ಸಂಘದ ವಲಯ ಅಧ್ಯಕ್ಷ ಸಿಪ್ರಿಯನ್ ಫೆರ್ನಾಂಡಿಸ್, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ವಾಲ್ಟರ್ ಮೋನಿಸ್ ಮತ್ತು ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
ನಿವೃತ್ತ ಶಿಕ್ಷಕಿ ಎಲಿಜಾ ಫೆರ್ನಾಂಡಿಸ್ ಶುಭ ಹಾರೈಸಿದರು.
ಸಂಘದ ಅಧ್ಯಕ್ಷ ಫ್ರಾನ್ಸಿಸ್ ಮಿರಾಂಡಾ ಸ್ವಾಗತಿಸಿದರು. ಕಾರ್ಯದರ್ಶಿ ಕಾಲಿಸ್ತ್ ಡಿ ಸೋಜಾ ವಂದಿಸಿದರು. ಬೆನೆಡಿಕ್ಟ್ ಮಾರ್ಟಿಸ್ ಕಾರ್ಯಕ್ರಮ ನಿರೂಪಿಸಿದರು. ಭಾಗವಹಿಸಿದ್ದ ಎಲ್ಲಾ ಹಿರಿಯ ನಾಗರಿಕರನ್ನು ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು