11:26 PM Sunday22 - March 2026
ಬ್ರೇಕಿಂಗ್ ನ್ಯೂಸ್
ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ

ಇತ್ತೀಚಿನ ಸುದ್ದಿ

ಉಪರಾಷ್ಟ್ರಪತಿಗಳ ಕರ್ನಾಟಕ ಪ್ರವಾಸ: ಇಂದು ಶ್ರವಣಬೆಳಗೊಳ, ಮೇಲುಕೋಟೆ, ಮೈಸೂರು ಭೇಟಿ

10/11/2025, 09:19

ಬೆಂಗಳೂರು (reporterkarnataka.com): ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ರಾಜ್ಯ ಪ್ರವಾಸ ಕೈಗೊಂಡಿದ್ದು,‌ ಬೆಳಿಗಿನ ಜಾವ ಯಲಹಂಕ ಏರ್ ಫೋರ್ಸ್ ಸ್ಟೇಷನ್ ಗೆ ಆಗಮಿಸಿದರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವಾನ್ವಿತ ಉಪರಾಷ್ಟ್ರಪತಿಗಳಿಗೆ ಹೂಗುಚ್ಚ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.


ಈ ಸಮಯದಲ್ಲಿ ಕೇಂದ್ರದ ಬೃಹತ್ ಕೈಗಾರಿಕೆಗಳ ಸಚಿವರಾದ ಹೆಚ್. ಡಿ. ಕುಮಾರಸ್ವಾಮಿ, ನಗರಾಭಿವೃದ್ಧಿ ಸಚಿವರಾದ ಸುರೇಶ್ ಬಿ.ಎ (ಬೈರತಿ), ಸರ್ಕಾರದ ಮುಖ್ಯಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾದ ಎಂ.ಎ. ಸಲೀಮ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ್ ಜಿ, ಜೆಡಿಎಸ್ ಮುಖಂಡರಾದ ಪುಟ್ಟರಾಜು, ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಉಪರಾಷ್ಟ್ರಪತಿಗಳು ಇಂದು ಬೆಂಗಳೂರಿನ ಯಲಹಂಕ ಏರ್ ಫೋರ್ಸ್ ಸ್ಟೇಷನ್ ನಿಂದ ಹೆಲಿಕಾಪ್ಟರ್ ಮೂಲಕ ಹಾಸನ ಜಿಲ್ಲೆಯ ಶ್ರವಣಬೆಳಗೊಳ, ಮಂಡ್ಯ ಜಿಲ್ಲೆಯ ಮೇಲುಕೋಟೆ ಹಾಗೂ ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಇಂದೇ ನವದೆಹಲಿಗೆ ಪ್ರಯಾಣಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು