12:02 PM Monday10 - November 2025
ಬ್ರೇಕಿಂಗ್ ನ್ಯೂಸ್
Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:…

ಇತ್ತೀಚಿನ ಸುದ್ದಿ

ಮಂಗಳೂರು ಪಾಲ್ದನೆ ಚರ್ಚ್: ಪ್ರಕೃತಿಯಲ್ಲಿ ಒಂದು ದಿನ ಆಚರಣೆ

10/11/2025, 12:01

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಜಾ ಚರ್ಚ್ ಪಾಲನಾ ಸಮಿತಿ ಮತ್ತು ಚರ್ಚ್ ನ ಕ್ರೈಸ್ತ ಶಿಕ್ಷಣ ನೀಡುವ ಶಿಕ್ಷಕ- ಶಿಕ್ಷಕಿಯರು ಜಂಟಿಯಾಗಿ ‘ಪ್ರಕೃತಿಯಲ್ಲಿ ಒಂದು ದಿನ’ ಆಚರಣೆಯ ಅಂಗವಾಗಿ ಹೊನ್ನಾವರ ಶರಾವತಿ ನದಿ ಕಿನಾರೆಯಲ್ಲಿರುವ ಹೋಲಿ ಕ್ರಾಸ್‌ ಬ್ರದರ್ಸ್ ಸಂಸ್ಥೆಯ ಆವರಣಕ್ಕೆ ಭೇಟಿ ನೀಡಿ ಪ್ರಕೃತಿ ಸೌಂದರ್ಯವನ್ನು ಸವಿದರು.
ಚರ್ಚ್ ಪ್ರಧಾನ ಧರ್ಮಗುರು ವಂದನೀಯ ಫಾದರ್ ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರು ಪ್ರಾರ್ಥನೆಯೊಂದಿಗೆ ಈ ಪ್ರವಾಸಕ್ಕೆ ಚಾಲನೆ ನೀಡಿದರು. ಪ್ರಕೃತಿ ಮಾನವನಿಗೆ ದೇವರು ನೀಡಿದ ಒಂದು ವರ. ದಿನವಿಡೀ ಈ ಪ್ರಕೃತಿ ಮಾನವನಿಗೆ ಜೀವನದ ಒಂದು ಅಂಗವಾಗಿರುತ್ತದೆ. ಪಾಲನಾ ಸಮಿತಿಯವರ ಈ ಪ್ರವಾಸ ಮುಂದೆ ಅವರು ಸಲ್ಲಿಸುವ ಸೇವೆಗೆ ಒಗ್ಗಟ್ಟಿನ ಮಂತ್ರವಾಗುತ್ತದೆ ಎಂದವರು ಹೇಳಿದರು.
ಈ ಸಂದಭರ್ದಲ್ಲಿ ಚರ್ಚ್ ನ ಡಿಯಕೊನ್ ರೋವಿನ್ ಲೋಪೆಜ್, ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್‌ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ಕ್ರೈಸ್ತ ಶಿಕ್ಷಣ ಶಿಕ್ಷಕ- ಶಿಕ್ಷಕಿಯರ ಸಂಯೋಜಕಿ ಲಿಝಿ ಫೆರ್ನಾಂಡಿಸ್, ಆಧ್ಯಾತ್ಮಿಕ ಸಮಿತಿಯ ಸಂಯೋಜಕಿ ಪ್ರೆಸಿಲ್ಲಾ (ಪ್ರೆಸ್ಸಿ) ಫೆರ್ನಾಂಡಿಸ್, ವಾರ್ಡಿನ ಮುಖ್ಯಸ್ಥರು, ವಾರ್ಡ್ ಪ್ರತಿನಿಧಿಗಳು, ಸಂಘ ಸಂಸ್ಥೆಗಳ ಅಧ್ಯಕ್ಷರು, ಧರ್ಮ ಭಗಿನಿಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು