2:08 PM Wednesday5 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ…

ಇತ್ತೀಚಿನ ಸುದ್ದಿ

ಅಜೆಕಾರು: ಸ್ಕೂಟರ್ ಗೆ ಡಿಕ್ಕಿ ಹೊಡೆದು ಪರಾರಿಯಾದ ಟವೇರಾ ವಾಹನ ಆಟೋಗೆ ಡಿಕ್ಕಿ; ರಿಕ್ಷಾ ಚಾಲಕ ಸಾವು

31/08/2021, 18:29

ಕಾರ್ಕಳ(reporterkarnataka.com): ಇಲ್ಲಿನ ಅಜೆಕಾರು ನೂಜಿಗುರಿ ಎಂಬಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ರಿಕ್ಷಾ ಚಾಲಕ ಸಾವನ್ನಪ್ಪಿದ್ದಾರೆ. ಮೃತಪಟ್ಟ ರಿಕ್ಷಾ ಚಾಲಕರನ್ನು ಅಂಡಾರು ಗ್ರಾಮದ ಬಾಳ್ಜೆ ನಿವಾಸಿ ಶೇಖರ ಮೂಲ್ಯ(58) ಎಂದು ಗುರುತಿಸಲಾಗಿದೆ.

ನೂಜಿಗುರಿ ತಿರುವಿನಲ್ಲಿ ಟವೇರಾ ಕಾರನ್ನು ಅತಿವೇಗವಾಗಿ ಚಲಾಯಿಸಿ ಆಟೋರಿಕ್ಷಾಗೆ ಡಿಕ್ಕಿದ ಪರಿಣಾಮ ಈ ದುರ್ಘಟನೆ ನಡೆದಿದೆ.

ಅಪಘಾತದಲ್ಲಿ ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಶೇಖರ ಮೂಲ್ಯ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಅಸುನೀಗಿದ್ದಾರೆ.

ಶೇಖರ ಮೂಲ್ಯ ಕಾಡುಹೊಳೆ ಎಂಬಲ್ಲಿಂದ ಪ್ರಯಾಣಿಕರೊಬ್ಬರನ್ನು ಅಜೆಕಾರಿಗೆ ಬಿಟ್ಟು ವಾಪಸು ಕಾಡುಹೊಳೆ ರಿಕ್ಷಾ ಸ್ಟ್ಯಾಂಡ್ ಗೆ ಬರುತ್ತಿದ್ದಾಗ ದೊಂಡೇರಂಗಡಿ ಕಡೆಯಿಂದ ಅತೀವೇಗವಾಗಿ  ಬಂದ ಟವೇರಾ ವಾಹನ ನೂಜಿಗುರಿಯ ತಿರುವಿನಲ್ಲಿ ರಸ್ತೆಯ ಬಲಬದಿಗೆ ಬಂದು ಶೇಖರ ಮೂಲ್ಯ ಚಲಾಯಿಸುತ್ತಿದ್ದ ರಿಕ್ಷಾಗೆ ರಭಸವಾಗಿ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಶೇಖರ ಅವರ ತಲೆ ಹಾಗೂ ಕಾಲಿಗೆ ತೀವೃ ಗಾಯಗಳಾಗಿದ್ದು, ರಿಕ್ಷಾ ನುಜ್ಜುಗುಜ್ಜಾಗಿದ್ದು  ಶೇಖರ ಮೂಲ್ಯ ಅವರ ದೇಹ ರಿಕ್ಷಾದೊಳಗೆ ಸಿಲುಕಿಕೊಂಡಿದ್ದು ಬಳಿಕ ಸ್ಥಳೀಯರು ಹೊರತೆಗೆದು ಆಸ್ಪತ್ರೆಗೆ ಸಾಗಿಸಲು ನೆರವಾದರು. ಅಪಘಾತವೆಸಗಿದ ಕಾರು ನಿಯಂತ್ರಣ ಕಳೆದುಕೊಂಡು ಬಲಬದಿಯ ಚರಂಡಿಗೆ ಮಗುಚಿಬಿದ್ದಿದೆ. ಕಾರಿನ ಹಿಂಬದಿಯ ಚಕ್ರ ಕಿತ್ತುಹೋಗಿದ್ದು  ಅಪಘಾತದ ತೀವ್ರತೆಗೆ ಸಾಕ್ಷಿಯಾಗಿತ್ತು.

ಟವೇರಾ ಚಾಲಕ ದೊಂಡೇರಂಗಡಿಯ ಸನಿತ್ ಶೆಟ್ಟಿ ಎಂಬಾತ ಪಡುಬಿದ್ರೆಯ ಅದಾನಿ ಕಂಪನಿಯಲ್ಲಿ ಕಾರು ಚಾಲಕನಾಗಿದ್ದು, ಸೋಮವಾರ  ತನ್ನ ಸಹೋದರಿಯ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆಂದು ಅದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೊಂದಿಗೆ ಬಂದಿದ್ದ. ಪೆರ್ಡೂರಿನಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮ ಮುಗಿಸಿ ವಾಪಾಸು ಪಡುಬಿದ್ರೆಗೆ ಟವೇರಾ ಕಾರಿನಲ್ಲಿ ಯುವತಿಯೊಂದಿಗೆ ತೆರಳುತ್ತಿದ್ದಾಗ ತನ್ನ ವೇಗದ ಹಾಗೂ ನಿರ್ಲಕ್ಷ್ಯತನದ ಚಾಲನೆಯಿಂದ ಅಪಘಾತವೆಸಗಿ ಪರಾರಿಯಾಗಲು ಯತ್ನಿಸಿದ್ದ. ದೊಂಡೇರಂಗಡಿಯಿಂದ ಬರುತ್ತಿದ್ದಾಗ ಅಜೆಕಾರು ಸಮೀಪದ ಗುಡ್ಡೆಯಂಗಡಿ ಎಂಬಲ್ಲಿ ಸ್ಕೂಟರಿಗೆ ಡಿಕ್ಕಿ ಹೊಡೆದು ಅಲ್ಲಿಂದ ನಿಲ್ಲಿಸದೇ ಪರಾರಿಯಾಗಲು ಯತ್ನಿಸಿ ಕಾರನ್ನು ಅತೀ ವೇಗವಾಗಿ ಓಡಿಸಿ ಅಮಾಯಕ ರಿಕ್ಷಾ ಚಾಲಕನ ಬಲಿಪಡೆದ ಕಾರು ಚಾಲಕನನ್ನ ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದು,ಈತ  ಕಂಠಪೂರ್ತಿ ಕುಡಿದು ಚಾಲನೆ ಮಾಡಿದ್ದಾನೆ ಎಂದು ಆರೋಪಿಸಿರುವ ಸ್ಥಳೀಯರು ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವಂತೆ ಒತ್ತಾಯಿಸಿದ್ದಾರೆ. ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಪಘಾತ ವಲಯ: ಅಜೆಕಾರಿನ ನೂಜಿಗುರಿ ಎಂಬಲ್ಲಿನ ಅಪಾಯಕಾರಿ ತಿರುವಿನಲ್ಲಿ ಎದುರಿನಿಂದ ಬರಹ ವಾಹನಗಳು ಗೋಚರಿಸದೇ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದು, ಈ ಭಾಗದ ರಸ್ತೆಯನ್ನು ಅಗಲೀಕರಣಗೊಳಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಈ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು