2:15 AM Monday9 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್

13/11/2025, 15:43

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ವ್ಯಕ್ತಿಯೊರ್ವ ಏಕಾಏಕಿ ರಸ್ತೆಗೆ ಬಂದ ಕಾರಣ ಲಾರಿಯ ಚಕ್ರಕ್ಕೆ ಸಿಲುಕಿ ಎರಡು ಕಾಲು ಕಟ್ ಆಗಿರುವ ಘಟನೆ ತಳುವೆ ಸಮೀಪ ಬುಧವಾರ ಸಂಜೆ ನಡೆದಿದೆ.
ತಾಲೂಕಿನ ಕೊಪ್ಪ ತೀರ್ಥಹಳ್ಳಿ ನಡುವಿನ ತಳುವೆ ಬಳಿ ಲಾರಿಯ ಹಿಂಬದಿಯ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಕಾಲು ಕಟ್ ಆಗಿದೆ. ಆದರೆ, ಈ ಅಪಘಾತಕ್ಕೆ ಆ ವ್ಯಕ್ತಿಯೇ ಕಾರಣ ಎಂಬ ಮಾತು ಸ್ಥಳೀಯರಿಂದ ಕೇಳಿ ಬರುತ್ತಿದೆ. ಬುಧವಾರ ಬೆಳಗ್ಗೆಯಿಂದ ರಸ್ತೆಯಲ್ಲಿ ಓಡಾಡುವ ಬಸ್ ಹಾಗೂ ಕಾರುಗಳಿಗೆ ಅಡ್ಡ ಹೋಗುತ್ತಿದ್ದ ಎಂದು ತಿಳಿದು ಬಂದಿದೆ. ಮಧ್ಯಾಹ್ನ ಖಾಸಗಿ ಬಸ್ ವೊಂದಕ್ಕೆ ಅಡ್ಡ ಹೋಗಿದ್ದಾನೆ ಬಸ್ ನಿಧಾನವಾಗಿ ಬರುತ್ತಿದ್ದ ಕಾರಣ ಬ್ರೇಕ್ ಹಾಕಲಾಗಿದೆ. ನಂತರ ಬಸ್ ಡ್ರೈವರ್ ಈತನಿಗೆ ಬೈದು ಬುದ್ಧಿವಾದ ಹೇಳಿ ಹೋಗಿದ್ದರು ಎಂದು ತಿಳಿದುಬಂದಿದೆ.
ಆದರೂ ಸಂಜೆ ಲಾರಿ ಬರುತ್ತಿದ್ದದ್ದನ್ನು ನೋಡಿ ಏಕಾಏಕಿ ರಸ್ತೆಗೆ ಹಾರಿದ್ದಾನೆ. ಈ ವೇಳೆ ಲಾರಿ ಚಾಲಕ ಎಷ್ಟೇ ತಪ್ಪಿಸಿದರು ಲಾರಿ ಹಿಂದಿನ ಚಕ್ರಕ್ಕೆ ಸಿಲುಕಿ ಕಾಲು ಕಟ್ ಮಾಡಿಕೊಂಡಿದ್ದಾನೆ.
ಈ ಪ್ರಕರಣ ವಿಚಿತ್ರವಾಗಿದ್ದು ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಜರುಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು