9:09 PM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

14/11/2025, 18:53

ಹಾವೇರಿ(reporterkarnataka.com): ಬಿಹಾರ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರೀಯತೆ ಲೋಕಸಭಾ ಚುನಾವಣೆ ಬಳಿಕವೂ ದೃಡಪಟ್ಟಿದೆ. ಮಹಾರಾಷ್ಟ್ರ, ಹರಿಯಾಣ ಬಿಹಾರ ಎಲ್ಲಾ ಕಡೆ ಮೋದಿಯವರ ಜನಪ್ರೀಯತೆ ದೃಢಪಟ್ಟಿದೆ. ಕಾಂಗ್ರೆಸ್ ನವರು ಎಲ್ಲರೂ ತಮ್ಮ ಜೊತೆ ಇದ್ದಾರೆ ಅಂತ ತಿಳಿದುಕೊಂಡಿದ್ದರು, ಅದು ಸುಳ್ಳಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬಿಹಾರ್ ನಲ್ಲಿ ಬಹಳ ದೊಡ್ಡ ಜಾತಿ ರಾಜಕಾರಣ, ಸಮೀಕರಣದ ಬಗ್ಗೆ ಚರ್ಚೆ ಆಗುತ್ತ ಇತ್ತು. ಕಾಂಗ್ರೆಸ್ ನವರು ಎಲ್ಲರೂ ತಮ್ಮ ಜೊತೆ ಇದ್ದಾರೆ ಅಂತ ತಿಳಿದುಕೊಂಡಿದ್ದರು, ಅದು ಸುಳ್ಳಾಗಿದೆ. ಎಸ್ ಸಿ ಎಸ್ ಟಿ ಸಮುದಾಯದ ಶೇ 80% ಜನ ಬಿಜೆಪಿಗೆ ಮತ ಹಾಕಿದ್ದಾರೆ. ಹಿಂದುಳಿದ ವರ್ಗಗಳು, ಎಸ್ ಸಿ ಎಸ್ ಟಿ ಸಮಾಜ ನಮಗೆ ಬೆಂಬಲ ಕೊಟ್ಟಿದೆ. ಕಾಂಗ್ರೆಸ್ ನವರು ಅತಿಹೆಚ್ಚು ತುಷ್ಟೀಕರಣ ಮಾಡಲು ಹೋದ ಪರಿಣಾಮ ಅಲ್ಪ ಸಂಖ್ಯಾತರ ತದ್ವಿರುದ್ಧವಾಗಿ ಮತಗಳು ಒಂದು ಗೂಡಿದೆ. ಇದು ಪ್ರಧಾನಿ ನರೇಂದ್ರ ಮೋದಿಯವರು ಮುಂಬರುವ ದಿನಗಳಲ್ಲಿ ದೇಶದ ಹಿತದೃಷ್ಟಿಯಿಂದ ಅಭಿವೃದ್ದಿ ದೃಷ್ಟಿಯಿಂದ ಪ್ರಮುಖ ನಿರ್ಧಾರ ತೆಗೆದುಕೊಳ್ಳಲು ಜನರ ದೊಡ್ಡ ಆಶೀರ್ವಾದ ಆಗಿದೆ ಎಂದು ಹೇಳಿದರು.
ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಮತಗಳ್ಳತನದ ಕುರಿತು ಮಾಡಿತ್ತಿರುವ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮತಗಳ್ಳತನ- ಯಾರಿಂದ ಆಗಿದೆ? ಪುರಾವೆ ಏನಿದೆ? ಮತ ಕಳೆದುಕೊಂಡವರಿಂದಲೂ ಆರೋಪ ಇಲ್ಲ. ಕದ್ದವರು ಯಾರು ಅಂತ ಇಲ್ಲ. ರಾಹುಲ್ ಗಾಂಧಿ ಯವರೇ ದೇಶದ ಎಲ್ಲಾ ರಾಜ್ಯಗಳಲ್ಲಿ ಮತ ಶುದ್ದೀಕರಣ ಆಗಬೇಕು ಅಂತ ಪತ್ರ ಬರೆದಿದ್ದಾರೆ. ಎಸ್ ಐಆರ್ ಆದರೆ ಶುದ್ದೀಕರಣ ಆಗುತ್ತದೆ. ಕಾಂಗ್ರೆಸ್ ನವರು ಸುಳ್ಳನ್ನು ಪದೇ ಪದೇ ಹೇಳಿ ಸತ್ಯ ಮಾಡಲು ಹೋಗಿದ್ದನ್ನು ಜನ ನೋಡಿದಾರೆ, ಅವರ ಅರಾಜಕತೆ ನೋಡಿದ್ದಾರೆ. ನಾಯಕರಿಗಿಂತ ಜನ ಬುದ್ದಿವಂತರಿದ್ದಾರೆ ಎಂದು ಬಿಹಾರ್ ಜನ ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದರು.

*ಬಿಜೆಪಿ ಬಹುಮತ:*
ಬಿಹಾರ ಚುನಾವಣೆ ಫಲಿತಾಂಶ ರಾಜ್ಯ ಬಿಜೆಪಿಗೆ ಯಾವ ರೀತಿಯ ಪಾಠವಾಗುತ್ತದೆ ಎಂದು ಕೇಳಿದ ಪ್ರಶ್ನೆಗೆ ರಾಜ್ಯದ ದುಷ್ಟ ಕೆಟ್ಟ ಕಾಂಗ್ರೆಸ್ ಸರ್ಕಾರದ ವಿರುದ್ದ ನಾವೆಲ್ಲ ಒಕ್ಕಟ್ಟಾಗಿ ಜನಪರವಾದ ಹೋರಾಟಗಳನ್ನು ಮಾಡಿದರೆ ಖಂಡಿತವಾಗಿ ಮುಂದಿನ ಚುನಾವಣೆಯಲ್ಲಿ ಖಂಡಿತ ಬಿಜೆಪಿ ಬಹುಮತ ಬರಲಿದೆ ಎಂದು ಹೇಳಿದರು.
ಚುನಾವಣೆ ಸಂದರ್ಭದಲ್ಲಿ ಬಾಂಬ್ ಬ್ಲಾಸ್ಟ್ ಆಗಿರುವ ಬಗ್ಗೆ ಕಾಂಗ್ರೆಸ್ ನಾಯಕರು ಮಾಡಿರುವ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಾಂಬ್ ಬ್ಲಾಸ್ಟ್ ಗೂ ಚುನಾವಣೆಗೂ ಸಂಬಂಧ ಇಲ್ಲ. ಕಾಂಗ್ರೆಸ್ ನವರು ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ. ಜನರು ಬುದ್ದಿವಂತರಿದ್ದಾರೆ ಎಂದು ಹೇಳಿದರು.

*ರಾಜ್ಯ ಸರ್ಕಾರವೇ ಹೊಣೆ:*
ಮುಧೋಳದಲ್ಲಿ ಕಬ್ಬಿನ ದರ ವಿಚಾರದಲ್ಲಿ ಮುಧೋಳದಲ್ಲಿ ಗಲಾಟೆ ಆಗಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಸರ್ಕಾರ ಬೆಳಗಾವಿಯಲ್ಲಿ ತೋರಿಸಿದ ಆಸಕ್ತಿ ಮುಧೋಳದಲ್ಲಿ ತೋರಿಸಿಲ್ಲ. ಇದಕ್ಕೆ ಸರ್ಕಾರವೇ ನೇರ ಹೊಣೆ ಸರಿಯಾದ ಸಮಯದಲ್ಲಿ ನಿಭಾಯಿಸಿದ್ದರೆ ಅವಘಡ ತಪ್ಪಿಸಬಹುದಿತ್ತು. ಈ ಬಗ್ಗೆ ತನಿಖೆ ಆಗಲಿ, ಮುಗ್ದ ರೈತರಿಗೆ ಆದ ಕಬ್ಬಿನ ನಷ್ಟ ಸರ್ಕಾವರೇ ತುಂಬಿಕೊಡಲಿ. ಇದು ಬೇಜವಾಬ್ದಾರಿ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.
ಸಚಿವ ಈಶ್ವರ್ ಖಂಡ್ರೆ ಘಟನೆಗೆ ಬಿಜೆಪಿ ಕಾರಣ ಎಂದು ಮಾಡಿರುವ ಆರೋಪಕ್ಕೆ ತಿರುಗೇಟು ನೀಡಿದ ಅವರು ಈಶ್ವರ ಖಂಡ್ರೆಯವರಿಗೆ ಏನು ಗೊತ್ತು?ಇದಕ್ಕೆ ಬಿಜೆಪಿಯವರು ಹೇಗೆ ಕಾರಣ? ಪ್ರತಿಭಟನೆ ಕುಳಿರುವ ರೈತರು ಎಲ್ಲ ಜಿಲ್ಲೆಗಳಲ್ಲಿ ಸರ್ಕಾರದ ವಿರುದ್ದ ತಿರುಗಿಬಿದ್ದಿದ್ದಾರೆ ಅದು ಅವರ ಕಣ್ಣಿಗೆ ಕಾಣದಿದ್ದರೆ ದುರ್ದೈವ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು