10:09 PM Friday14 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ…

ಇತ್ತೀಚಿನ ಸುದ್ದಿ

ತುಮಕೂರು ಶ್ರೀದೇವಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಜ್ಞಾನ ವಿದ್ಯಾರ್ಥಿಗಳಿಗಾಗಿ ಶ್ರೀ ಅನ್ವೇಷಣಾ -2025 ಕಾರ್ಯಕ್ರಮ

14/11/2025, 21:52

ತುಮಕೂರು(reporterkarnataka.com): ಶಿಕ್ಷಣದಲ್ಲಿನ ತಾರತಮ್ಯ ನೀತಿ ಸಲ್ಲದು ಎಂದು ತುಮಕೂರಿನ ಪದವಿ ಪೂರ್ವ ಇಲಾಖೆಯ ಉಪನಿರ್ದೇಶಕ ಡಾ.ಬಾಲಗುರುಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.
ತುಮಕೂರಿನ ಶ್ರೀದೇವಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಜ್ಞಾನ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಶ್ರೀ ಅನ್ವೇಷಣಾ -2025 ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು. ಇಂಜಿನಿಯರಿಂಗ್ ಮೆಡಿಕಲ್, ಶಿಕ್ಷಣ ಮೇಲು ಕಲೆ ಮತ್ತು ಕಾಮರ್ಸ್ ಕೀಳು ಎಂಬ ಮನೋಭಾವ, ಪ್ರವೃತ್ತಿ ಸಮಾಜದಲ್ಲಿ, ಪೋಷಕರಲ್ಲಿ ಹೆಚ್ಚಾಗುತ್ತಿದೆ ಇದು ಅತ್ಯಂತ ಅಪಾಯಕಾರಿ ಬೆಳವಣಿಗೆಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ಇದರ ನಡುವೆಯೂ ಒಂದು ಸಮಾಧಾನಕರ ಸಂಗತಿ ಎಂದರೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಇಂತಹ ತಾರತಮ್ಯ ತೊಡೆದು ಹಾಕುವಲ್ಲಿ ಸ್ವಲ್ಪಮಟ್ಟಿಗೆ ಸಹಕಾರಿಯಾಗಿದೆ. ಉದಾಹರಣೆಗೆ ವಿಜ್ಞಾನದ ವಿದ್ಯಾರ್ಥಿ ಇಷ್ಟಪಟ್ಟರೆ ರಾಜಕೀಯ, ಸಮಾಜಶಾಸ್ತ್ರವನ್ನು ಅಭ್ಯಾಸ ಮಾಡಬಹುದು. ಅದೇ ರೀತಿ ಕಲಾವಿಭಾಗದ ವಿದ್ಯಾರ್ಥಿ ಆಸಕ್ತಿ ಇದ್ದರೆ ಭೌತಶಾಸ್ತ್ರ ಮತ್ತು ರಾಸಾಯನ ಶಾಸ್ತ್ರವನ್ನು ಅಭ್ಯಾಸ ಮಾಡಬಹುದು ಎಂದು ಉದಾಹರಣೆ ನೀಡಿದರು.
ಇಂದು ಶಿಕ್ಷಣ ಯಾವ ಮಟ್ಟಕ್ಕೆ ಹೋಗುತ್ತಿದೆ ಎಂದರೆ ವೈದ್ಯರೇ ವಿಧ್ವಂಸಕ, ರಾಷ್ಟ್ರದ್ರೋಹಿ ಕೆಲಸದಲ್ಲಿ ಭಾಗಿಯಾಗುತ್ತಿದ್ದಾರೆ ಎಂದರೆ ನಮ್ಮ ಶಿಕ್ಷಣ ನಮ್ಮ ಸಮಾಜ ಯಾವ ಕಡೆಗೆ ಹೋಗುತ್ತಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕಿದೆ. ವಿಜ್ಞಾನ ಎಂದರೇನು ವೈಚಾರಿಕ ಮನೋಭಾವ ಶಿಸ್ತು ಬೆಳೆಸುವುದು ಮತ್ತು ಹುಡುಕಾಟ ವಿಜ್ಞಾನ ಆಗಿದೆ. ಇಂಜಿನಿಯರಿಂಗ್, ಮೆಡಿಕಲ್ ಮಾತ್ರ ಶ್ರೇಷ್ಠ ಕಾಮರ್ಸ್ ಕನಿಷ್ಠ ಎಂಬ ಮನೋಭಾವ ಸಲ್ಲದು. ತುಮಕೂರು ಜಿಲ್ಲೆಯಲ್ಲಿ 6೦ಸಾವಿರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಇದರಲ್ಲಿ ೩೦ ಸಾವಿರ ವಿದ್ಯಾರ್ಥಿಗಳು ವಿಜ್ಞಾನದ ವಿಷಯ ಕಲಿಯುತ್ತಿದ್ದಾರೆ ಜ್ಞಾನ ಎಂದಿಗೂ ಅಹಂಕಾರ ಕೊಡುವುದಿಲ್ಲ ಬದಲಿಗೆ ವಿವೇಕ ಮತ್ತು ಎತ್ತರದ ಸ್ಥಾನಕ್ಕೆ ತೆಗೆದುಕೊಂಡು ಹೋಗುತ್ತದೆ ಎಂದರು. ಇತ್ತೀಚಿನ ದಿನಗಳಲ್ಲಿ ಕಾಮರ್ಸ್ ವಿಷಯ ಜಾಗತಿಕ ಮಹತ್ವ ಪಡೆಯುತ್ತಿದೆ ಅದೇ ರೀತಿ ಹೆಚ್ಚಿನ ಉದ್ಯೋಗಾವಕಾಶಗಳು ದೊರಕುತ್ತಿದೆ. ತುಮಕೂರು ಜಿಲ್ಲೆಯನ್ನು ಕರ್ಮಭೂಮಿನ್ನಾಗಿ ಮಾಡಿಕೊಂಡು ತಮ್ಮ ಸತತ ಪರಿಶ್ರಮದಿಂದ ರಾಜ್ಯಕ್ಕೆ ಮಾದರಿಯಾಗುವಂತಹ ವಿದ್ಯಾಸಂಸ್ಥೆಯನ್ನು ಕಟ್ಟಿ ಜಿಲ್ಲೆಗೆ ಅಮೂಲ್ಯ ಕೊಡುಗೆ ನೀಡಿರುವ ಡಾ.ಎಂ.ಆರ್.ಹುಲಿನಾಯ್ಕರ್ ಸಾಧನೆ ಅನನ್ಯ ಮತ್ತು ಸುವರ್ಣಾಕ್ಷರಗಳಲ್ಲಿ ಬರೆದಿಡುವಂತದ್ದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮತ್ತೊಬ್ಬ ಮುಖ್ಯ ಅತಿಥಿ ಸುಬ್ಬರಾವ್ ಮಾತನಾಡಿ, ಪಾಠ ಜೊತೆಗೆ ಸಂಸ್ಕಾರವು ಮುಖ್ಯವಾಗಿದೆ. ಸಂಸ್ಕಾರವಿಲ್ಲದ ಶಿಕ್ಷಣ ಅರಾಜಕತೆ ಅಧಃಪತನಕ್ಕೆ ನೂಕುತ್ತದೆ ಎಂಬುದಕ್ಕೆ ಎಲ್ಲ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ವೃದ್ಧಾಶ್ರಮಗಳೇ ಸಾಕ್ಷಿಯಾಗಿದೆ ಎಂದು ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ನರೇಂದ್ರ ವಿಶ್ವನಾಥ್ ಮಾತನಾಡಿ, ಸೋಲು ಜೀವನದ ಕೊನೆಯಲ್ಲ. ಆದರೆ ಪ್ರಯತ್ನ ಮಾತ್ರ ಎಂದಿಗೂ ಕೊನೆಯಾಗಬಾರದು ಸಾಧಿಸುವ ಛಲ ಮತ್ತು ಸತತ ಪ್ರಯತ್ನದಿಂದ ಎಂತಹ ಸಾಧನೆ ಮಾಡಬಹುದು ಎಂಬುದಕ್ಕೆ ನಮ್ಮ ಮುಂದೆ ಅನೇಕ ಉದಾಹರಣೆಗಳಿವೆ ಎಂದರು.

ವೇದಿಕೆಯಲ್ಲಿ ಉಪಪ್ರಾಂಶುಪಾಲ ಡಾ. ಚಂದ್ರಶೇಖರ್, ಎಂಬಿಎ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರದೀಪ್‌ಕುಮಾರ್ ಎಂಸಿಎ ವಿಭಾಗದ ಪ್ರೊ. ಕಾವ್ಯಕುಮಾರ್, ಭಾರತಿಶಾಂತಕುಮಾರ್ ಮೊದಲಾದವರು ಹಾಜರಿದ್ದರು. ಪೋಸ್ಟರ್, ಮಾಡೆಲ್ ಮತ್ತು ಕ್ವಿಜ್ ವಿಭಾಗದಲ್ಲಿ ತಲಾ ಐವರು ವಿದ್ಯಾರ್ಥಿಗಳು ಸೇರಿದಂತೆ 15 ವಿದ್ಯಾರ್ಥಿಗಳಿಗೆ ತೀರ್ಪುಗಾರರ ಸಮ್ಮುಖದಲ್ಲಿ ನಗದು ಬಹುಮಾನ ನೀಡಿ ಗೌರವಿಸಲಾಯಿತು.
ಶ್ರೀ ಅನ್ವೇಷಣಾ ಸ್ಪರ್ಧೆಯಲ್ಲಿ ತುಮಕೂರು ಜಿಲ್ಲೆ ಎಲ್ಲಾ ತಾಲೂಕಿನ ಹಾಗೂ ಅಕ್ಕಪಕ್ಕದ ಜಿಲ್ಲೆಗಳಿಂದ 35೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು