1:38 PM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಅಂಧ ಮಹಿಳೆಯರ ‌ಟಿ20 ವಿಶ್ವಕಪ್‌ ಟೂರ್ನಿಗೆ ಚಾಲನೆ: ಭಾರತ – ನೇಪಾಳ‌ ನಡುವಿನ ಪಂದ್ಯ ವೀಕ್ಷಿಸಿದ ಸಚಿವೆ ಹೆಬ್ಬಾಳ್ಕರ್

14/11/2025, 22:00

ಬೆಂಗಳೂರು(reporterkarnataka.com): ವಿಶೇಷ ಮಕ್ಕಳು ಪಾಲ್ಗೊಳ್ಳುತ್ತಿರುವ ಅಂಧರ ಕ್ರಿಕೆಟ್ ಟೂರ್ನಿಗೆ ಜಾಗತಿಕವಾಗಿ ಮನ್ನಣೆ ಸಿಗಲಿ ಎಂಬುದೇ ನನ್ನ ಆಶಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಬೆಂಗಳೂರಿನ ತಿರುಮೇನಹಳ್ಳಿಯ ಸಂಪ್ರಸಿದ್ದಿ ಮೈದಾನದಲ್ಲಿ ನಡೆಯುತ್ತಿರುವ ಅಂಧ ಮಹಿಳೆಯರ ಮೊದಲ ಟಿ20 ವಿಶ್ವಕಪ್ ಟೂರ್ನಿಗೆ ಚಾಲನೆ ನೀಡಿ ಮಾತನಾಡಿದ ಸಚಿವರು, ಸರಿಯಾಗಿ ಕೈಕಾಲು ಇದ್ದರೂ, ಕಣ್ಣುಗಳು ಕಾಣಿಸಿದರೂ ಸಾಮಾನ್ಯ ಜನರು ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಕಷ್ಟ. ಆದರೆ, ಸರಿಯಾಗಿ ಕಣ್ಣುಕಾಣದ ಮಕ್ಕಳು ಕ್ರಿಕೆಟ್‌ ಆಡುವುದು ಅಷ್ಟು ಸುಲಭವಲ್ಲ ಎಂದರು.


ಈ ಮಹತ್ವದ ಟೂರ್ನಿಯ ಪ್ರಮುಖ ಭಾಗವನ್ನು ಬೆಂಗಳೂರಿನಲ್ಲಿ ಆಯೋಜಿಸುತ್ತಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯ. ನಮ್ಮ ರಾಜ್ಯವು ಕ್ರೀಡೆಗೆ ಸಮಾನ ಅವಕಾಶಗಳನ್ನು ಉತ್ತೇಜಿಸುವಲ್ಲಿ ಮುಂಚೂಣಿಯಲ್ಲಿರುವುದು ಎಲ್ಲರೂ ತಿಳಿದಿರುವ ವಿಷಯ. ನಮ್ಮ ಇಲಾಖೆಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.

* *ಪಂದ್ಯ ವೀಕ್ಷಿಸಿದ ಸಚಿವರು:*
ಭಾರತ ಹಾಗೂ ನೇಪಾಳ ನಡುವಿನ ಪಂದ್ಯವನ್ನು ಕೆಲಕಾಲ ಸಚಿವರು ವೀಕ್ಷಿಸಿದರು. ಚಪ್ಪಾಳೆ ತಟ್ಟುವ ಮೂಲಕ ಎರಡೂ ತಂಡಗಳ ಆಟಗಾರ್ತಿಯರನ್ನು ಹುರಿದುಂಬಿಸಿದರು. ಬಳಿಕ ಕೆಲಕಾಲ ಪಂದ್ಯದ ವೀಕ್ಷಕ ವಿವರಣೆಯಲ್ಲಿ ಪಾಲ್ಗೊಂಡರು.
ಈ ವೇಳೆ ಸಮರ್ಥನಂ ಟ್ರಸ್ಟ್ ಸಂಸ್ಥಾಪಕರಾದ ಡಾ.ಮಹಾಂತೇಶ್ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು