3:01 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ದುರುಗಮ್ಮ ದೇವರಿಗೆ ಪೂಜಾ ಪಂಚಾಮೃತ ಅಭಿಷೇಕ, ಕುಂಕುಮ ಅಲಂಕಾರ: ಕೊರೊನಾ ತೊಲಗಲು ಪ್ರಾರ್ಥನೆ 

31/08/2021, 20:11

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಶ್ರಾವಣ ಪ್ರಯುಕ್ತ ಕೂಡ್ಲಗಿಯ ಜಂಗಮಸೋವೇನಹಳ್ಳಿ ಗ್ರಾಮದ ಅಧಿದೇವತೆ ಶ್ರೀ ದುರುಗಮ್ಮ ದೇವರಿಗೆ ಮಂಗಳವಾರ ಪೂಜಾ ಪಂಚಾಮೃತ ಅಭಿಷೇಕ, ಕುಂಕುಮ ಅಲಂಕಾರ ಮಾಡಲಾಯಿತು.

ಜಘಮಸೋವೇವನಹಳ್ಳಿ ಗ್ರಾಮದ ಭಕ್ತರು ಗ್ರಾಮದ ಅಧಿದೇವತೆ ಶ್ರೀ ದುರುಗಮ್ಮ ದೇವರಿಗೆ ಹೊಳಗೆ ಕರೆದೊಯ್ಯುವ  ಮೂಲಸ್ಥಳ ಗ್ರಾಮದ ಹೊರವಲಯದ ಶಿವಪುರದ ಕಾದಿಟ್ಟ ಅರಣ್ಯ ಪ್ರದೇಶದ ಬೆಟ್ಟದ ಅರಣ್ಯದಲ್ಲಿನ ಪ್ರಕೃತಿ ಹಸಿರ ವನಸಿರಿ ರಮಣೀಯ ರಮ್ಯತಾಣ ಬೆಟ್ಟದ ಮದ್ಯದಲ್ಲಿ ಬಂಡೆಕಲ್ಲಿನಲ್ಲಿ ವಡ ಮೂಡಿರುವ ಶ್ರೀ ದುರಗಮ್ಮ ದೇವತೆಗೆ ವಿಶೇಷ ಪೂಜೆ ನೆರವೇರಿಸಿದರು.

ಪಂಚಾಮೃತ ಅಭಿಷೇಕ ಕುಂಕುಮದ ಅಲಂಕಾರ ಮಾಡಲಾಯಿತು. ಈ ಸಂದರ್ಭದಲ್ಲಿ ಅಬಾಲವೃದ್ದರಾದಿಯಾಗಿ ಭಕ್ತಿ ಸಮರ್ಪಿಸಿ ನಾಡಿಗೆ ಅಂಟಿದ ಕೊರೊನಾ ಮಹಮಾರಿ ತೊಲಗಲಿ ಎಂದು ಪ್ರಾರ್ಥಿಸಿದರು.

ಗ್ರಾಮಕ್ಕೆ ಮಾತ್ರವಲ್ಲ ನಾಡಿಗೆಲ್ಲ ಸಕಾಲಕ್ಕೆ ಉತ್ತಮ ಮಳೆಯಾಗಿ ಉತ್ತಮ ಪಸಲು ಬರಲಿ, ನೆರೆ ಬರ ತೊಲಗಲಿ ಎಂದು ಕೋರಿದರಲ್ಲದೇ ತಮ್ಮ ಇಷ್ಟಾರ್ಥ ಸಿದ್ದಿಗಾಗಿ ಆರ್ಶೀವಾದ ಪಡೆದು ದನ್ನತೆ ಮರೆದರು. ನಂತರ ಭಕ್ತರೆಲ್ಲಾ ಅರಣ್ಯದ ಹಸಿರಿನ ಪ್ರಕೃತಿಯ ಸಿರಿಯಲಿ ಸಾಮೂಹಿಕವಾಗಿ ಮಹಾ ಪ್ರಾಸದ ಸವಿದರು. ಈ ಮೂಲಕ ಜಂಗಮಸೋವೇನಹಳ್ಳಿ ಗ್ರಾಮಸ್ಥರು ಶ್ರೀ ದುರುಗಮ್ಮ ದೇವಿಗೆ ಭಕ್ತಿ ಸಮರ್ಪಿಸಿ ದೇವರ ಕೃಪೆಗೆ ಪಾತ್ರರಾದರು. ಗ್ರಾಮದ ಹಿರಿಯರು ಹಾಗೂ ಯುವಕರು ಮಕ್ಕಳು ಕಾರ್ಯಕ್ರಮದಲ್ಲಿ ಸಕ್ರೀಯವಾಗಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು