8:56 PM Saturday15 - November 2025
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್…

ಇತ್ತೀಚಿನ ಸುದ್ದಿ

ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು ಪರಾರಿ

15/11/2025, 20:29

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಪಟ್ಟಣದಲ್ಲಿ ನೀಲಂ ಸೇಠ್ (ಮಾರ್ವಾಡಿ) ಅವರ ಕಾಳುಮೆಣಸು ಗೋಡೌನ್‌ನಲ್ಲಿ ದೊಡ್ಡ ಮಟ್ಟದ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಗೋಡೌನ್‌ನಲ್ಲಿದ್ದ ಸುಮಾರು 80 ಮೂಟೆ (ಸುಮಾರು 1,800 ಕೆ.ಜಿ.) ಕಾಳುಮೆಣಸು ಅಜ್ಞಾತರು ಕಳವುಮಾಡಿರುವುದು ಪತ್ತೆಯಾಗಿದೆ.
ಖಚಿತ ಮಾಹಿತಿಯ ಮೇರೆಗೆ ಸರ್ಕಲ್ ಇನ್ಸ್‌ಪೆಕ್ಟರ್ ರಾಜಶೇಖರ್ ಅವರ ನೇತೃತ್ವದಲ್ಲಿ ಸಬ್‌ಇನ್ಸ್‌ಪೆಕ್ಟರ್ ಶ್ರೀನಾಥ್ ರೆಡ್ಡಿ ಹಾಗೂ ಪೊಲೀಸರು ದಾಳಿ ನಡೆಸಿ, ಬಾಪುನಗರದ ಸಬೀನಾ ಎಂಬ ಮಹಿಳಾ ಆರೋಪಿಯನ್ನು ಬಂಧಿಸಿದ್ದಾರೆ. ಇನ್ನೂ ಮೂವರು ಆರೋಪಿಗಳು — ಮತ್ತೊಬ್ಬ ಮಹಿಳೆ ಹಾಗೂ ಇಬ್ಬರು ಪುರುಷರು — ಪರಾರಿಯಾಗಿದ್ದು, ಅವರ ಪತ್ತೆಗೆ ವಿಶೇಷ ತಂಡವನ್ನು ರಚಿಸಲಾಗಿದೆ.
ಐದು ಬಾಗಿಲುಗಳಿರುವ ಗೋಡೌನ್‌ಗೆ ಕಳ್ಳರು ಒಂದೇ ಬಾಗಿಲಿನ ಮೂಲಕ ನುಗ್ಗಿದ್ದಾರೆ ಎನ್ನಲಾಗಿದೆ.
ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಕಾರ್ಯಾಚರಣೆಯಲ್ಲಿ CPI ರಾಜಶೇಖರ್, SI ಶ್ರೀನಾಥ್ ರೆಡ್ಡಿ, ಶಶಿ ಹಾಗೂ ಪೊಲೀಸ್ ಸಿಬ್ಬಂದಿಗಳಾದ ವೈಭವ್, ಸಚಿನ್, ಮಹೇಂದ್ರ, ಮಲ್ಲಿಕಾರ್ಜುನ, ವಿನಯ್, ಮನು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು