10:29 PM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು ಪರಾರಿ

15/11/2025, 20:29

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಪಟ್ಟಣದಲ್ಲಿ ನೀಲಂ ಸೇಠ್ (ಮಾರ್ವಾಡಿ) ಅವರ ಕಾಳುಮೆಣಸು ಗೋಡೌನ್‌ನಲ್ಲಿ ದೊಡ್ಡ ಮಟ್ಟದ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಗೋಡೌನ್‌ನಲ್ಲಿದ್ದ ಸುಮಾರು 80 ಮೂಟೆ (ಸುಮಾರು 1,800 ಕೆ.ಜಿ.) ಕಾಳುಮೆಣಸು ಅಜ್ಞಾತರು ಕಳವುಮಾಡಿರುವುದು ಪತ್ತೆಯಾಗಿದೆ.
ಖಚಿತ ಮಾಹಿತಿಯ ಮೇರೆಗೆ ಸರ್ಕಲ್ ಇನ್ಸ್‌ಪೆಕ್ಟರ್ ರಾಜಶೇಖರ್ ಅವರ ನೇತೃತ್ವದಲ್ಲಿ ಸಬ್‌ಇನ್ಸ್‌ಪೆಕ್ಟರ್ ಶ್ರೀನಾಥ್ ರೆಡ್ಡಿ ಹಾಗೂ ಪೊಲೀಸರು ದಾಳಿ ನಡೆಸಿ, ಬಾಪುನಗರದ ಸಬೀನಾ ಎಂಬ ಮಹಿಳಾ ಆರೋಪಿಯನ್ನು ಬಂಧಿಸಿದ್ದಾರೆ. ಇನ್ನೂ ಮೂವರು ಆರೋಪಿಗಳು — ಮತ್ತೊಬ್ಬ ಮಹಿಳೆ ಹಾಗೂ ಇಬ್ಬರು ಪುರುಷರು — ಪರಾರಿಯಾಗಿದ್ದು, ಅವರ ಪತ್ತೆಗೆ ವಿಶೇಷ ತಂಡವನ್ನು ರಚಿಸಲಾಗಿದೆ.
ಐದು ಬಾಗಿಲುಗಳಿರುವ ಗೋಡೌನ್‌ಗೆ ಕಳ್ಳರು ಒಂದೇ ಬಾಗಿಲಿನ ಮೂಲಕ ನುಗ್ಗಿದ್ದಾರೆ ಎನ್ನಲಾಗಿದೆ.
ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಕಾರ್ಯಾಚರಣೆಯಲ್ಲಿ CPI ರಾಜಶೇಖರ್, SI ಶ್ರೀನಾಥ್ ರೆಡ್ಡಿ, ಶಶಿ ಹಾಗೂ ಪೊಲೀಸ್ ಸಿಬ್ಬಂದಿಗಳಾದ ವೈಭವ್, ಸಚಿನ್, ಮಹೇಂದ್ರ, ಮಲ್ಲಿಕಾರ್ಜುನ, ವಿನಯ್, ಮನು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು