1:37 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಆದೇಶ

15/11/2025, 23:02

ಬೆಂಗಳೂರು(reporterkarnataka.com): ಬೆಳಗಾವಿ ಭೂತರಾಮನಹಟ್ಟಿಯ ಕಿತ್ತೂರುರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 19 ಜಿಂಕೆಗಳು ಅಸಹಜವಾಗಿ ಮೃತಪಟ್ಟಿರುವ ಬಗ್ಗೆ ತೀವ್ರ ವ್ಯಾಕುಲ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ತನಿಖೆಗೆ ಆದೇಶ ನೀಡಿದ್ದಾರೆ.
ಪ್ರಾಥಮಿಕ ವರದಿಗಳ ರೀತ್ಯ ಈ ಜಿಂಕೆಗಳು ಸಾಂಕ್ರಾಮಿಕ ಕಾಯಿಲೆಯಿಂದ ಮೃತಪಟ್ಟಿರುವುದಾಗಿ ವರದಿಯಾಗಿದ್ದು, ಮೃಗಾಲಯದ ಬೇರೆ ಯಾವುದೇ ಪ್ರಾಣಿಗೆ ಸೋಂಕು ತಗುಲದಂತೆ ಎಲ್ಲ ಮುಂಜಾಗರೂಕತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಈ ಜಿಂಕೆಗಳು ಕಲುಷಿತ ನೀರು, ಆಹಾರ ಸೇವಿಸಿ ಕಾಯಿಲೆಗೆ ತುತ್ತಾಗಿ ಮೃತಪಟ್ಟಿವೆಯೇ ಅಥವಾ ಬೆಕ್ಕು ಇತ್ಯಾದಿ ಸಾಕು ಪ್ರಾಣಿಗಳಿಂದ ಈ ಕಾಯಿಲೆ ಹರಡಿದೆಯೇ ಎಂಬ ಬಗ್ಗೆ ಒಂದು ತಜ್ಞರ ಸಮಿತಿ ರಚಿಸಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.
ಮೃಗಾಲಯದಲ್ಲಿರುವ ಪ್ರಾಣಿಗಳು ಈ ರೀತಿ ಸಾವಿಗೀಡಾಗುವುದು ಆತಂಕದ ವಿಚಾರವಾಗಿದ್ದು, ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಮತ್ತು ಸಿಬ್ಬಂದಿಯ ನಿರ್ಲಕ್ಷ್ಯವಿದ್ದಲ್ಲಿ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವಂತೆಯೂ ಈಶ್ವರ ಖಂಡ್ರೆ ಆದೇಶ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು