12:36 PM Sunday16 - November 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್

ಇತ್ತೀಚಿನ ಸುದ್ದಿ

ಶಬರಿಮಲೆ ಯಾತ್ರೆ ಆರಂಭ: ಯಾತ್ರಾರ್ಥಿಗಳು ಮೂಗಿನೊಳಗೆ ನೀರು ಹೋಗದಂತೆ ಎಚ್ಚರ ವಹಿಸಲು ಸೂಚನೆ

16/11/2025, 12:34

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೇರಳದಲ್ಲಿ ಕಳೆದ ಕೆಲ ತಿಂಗಳುಗಳಿಂದ ಪತ್ತೆಯಾಗುತ್ತಿರುವ ‘ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್’ ಎಂಬ ಮಿದುಳು ಜ್ವರ ಪ್ರಕರಣದ ಹಿನ್ನೆಲೆಯಲ್ಲಿ ಕೇರಳ ಸರ್ಕಾರವು ಶಬರಿಮಲೆಯ ವಾರ್ಷಿಕ ಯಾತ್ರೆ ಕೈಗೊಳ್ಳುವವರಿಗೆ ಸೂಚನೆ ನೀಡಿದ್ದು, ಮೂಗಿನೊಳಗೆ ನೀರು ಹೋಗದಂತೆ ಎಚ್ಚರ ವಹಿಸುವಂತೆ ಹೇಳಿದೆ.
ಯಾವುದೇ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿರುವ ತಮ್ಮ ದಾಖಲೆ ಹಾಗೂ ಔಷಧಗಳನ್ನು ಕೊಂಡೊಯ್ಯಬೇಕು. ಯಾತ್ರೆಯ ಸಂದರ್ಭದಲ್ಲಿ ನಿಯಮಿತ ಔಷಧಗಳನ್ನು ನಿಲ್ಲಸಬಾರದು. ಶಬರಿಮಲೆಗೆ ನಡೆಯುವಂತ ಸಂದರ್ಭದಲ್ಲಿ ಒತ್ತಡ ನಿರ್ವಹಣೆಯಾಗಿ ನಡಿಗೆಯಂತ ಲಘು ವ್ಯಾಯಾಮ ಮಾಡುವಂತೆಯೂ ಸಲಹೆ ನೀಡಿದೆ.
‘ಬೆಟ್ಟವನ್ನು ನಿಧಾನವಾಗಿ ಹತ್ತಬೇಕು. ಮಧ್ಯದಲ್ಲಿ ಪುಟ್ಟ ವಿರಾಮ ತೆಗೆದುಕೊಳ್ಳಬೇಕು. ಸುಸ್ತು ಎನಿಸಿದರೆ, ಎದೆ ನೋವು ಕಂಡುಬಂದರೆ ವೈದ್ಯಕೀಯ ನೆರವು ಪಡೆಯಬೇಕು. ತುರ್ತು ಪರಿಸ್ಥಿತಿಯಲ್ಲಿ 04735 203232 ಸಂಖ್ಯೆಯನ್ನು ಸಂಪರ್ಕಿಸಬೇಕು’ ಎಂದು ಕೇರಳ ಸರ್ಕಾರ ಹೇಳಿದೆ.
‘ಕುದಿಸಿದ ನೀರನ್ನೇ ಕುಡಿಯಬೇಕು. ಕೈತೊಳೆಯಲು, ಅಡುಗೆಗೆ, ಹಣ್ಣುಗಳನ್ನು ತೊಳೆಯಲು ಕುದಿಸಿದ ನೀರನ್ನೇ ಬಳಸಬೇಕು. ಹಳಸಿದ ಹಾಗೂ ಹೊರಗೆ ತೆರೆದಿದ್ದ ಆಹಾರಗಳನ್ನು ಸೇವಿಸಬಾರದು. ಬಯಲು ಬಹಿರ್ದೆಸೆ ನಿಷೇಧಿಸಲಾಗಿದೆ. ಶೌಚಾಲಯಗಳನ್ನೇ ಬಳಸಬೇಕು ಹಾಗೂ ನಂತರ ಶುಚಿಯಾಗಿ ಕೈತೊಳೆದುಕೊಳ್ಳಬೇಕು. ತ್ಯಾಜ್ಯಗಳನ್ನು ನಿರ್ದಿಷ್ಟ ಜಾಗದಲ್ಲೇ ಹಾಕಬೇಕು’ ಎಂದು ಸರ್ಕಾರ ಸೂಚಿಸಿದೆ.


‘ಬೆಟ್ಟ ಹತ್ತುವಾಗ ಹಾವು ಕಚ್ಚಿದರೆ ತಕ್ಷಣ ವೈದ್ಯಕೀಯ ನೆರವು ಕೋರಬೇಕು. ಆಸ್ಪತ್ರೆಗಳಲ್ಲಿ ಹಾವು ಕಡಿತ ಔಷಧ ದಾಸ್ತಾನು ಇಡಲಾಗಿದೆ. ಯಾತ್ರಿಕರ ವೈದ್ಯಕೀಯ ನೆರವಿಗಾಗಿ ವಿವಿಧ ವೈದ್ಯಕೀಯ ಕಾಲೇಜುಗಳ ತರಬೇತಿ ಹೊಂದಿದ ಆರೋಗ್ಯ ಕಾರ್ಯಕರ್ತರು ಮತ್ತು ವೈದ್ಯರನ್ನು ನಿಯೋಜಿಸಲಾಗಿದೆ. ಇವರು ಯಾತ್ರೆ ಸಾಗುವ ಮಾರ್ಗದಲ್ಲೇ ಲಭ್ಯರಿರಲಿದ್ದಾರೆ. ದಿನದ 24 ಗಂಟೆಗಳ ಕಾಲ ಪಂಪಾದಲ್ಲಿರುವ ವೈದ್ಯಕೀಯ ಕೇಂದ್ರ ಕೆಲಸ ಮಾಡಲಿದೆ’ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.
ಕನ್ನಡ ಸಹಿತ ವಿವಿಧ ಭಾಷೆಗಳಲ್ಲಿ ಜಾಗೃತಿ ಸಂದೇಶ
‘ಪರ್ವತ ಹತ್ತುವಾಗ ಯಾತ್ರಾರ್ಥಿಗಳು ಯಾವುದೇ ಅಸ್ವಸ್ಥತೆಯನ್ನು ಅನುಭವಿಸಿದರೆ ತಕ್ಷಣ ಹತ್ತಿರದ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯಬೇಕು. ಮಲಯಾಳಂ, ಕನ್ನಡ, ಇಂಗ್ಲಿಷ್, ಹಿಂದಿ, ತಮಿಳು ಹಾಗೂ ತೆಲುಗು ಸೇರಿದಂತೆ ವಿವಿಧ ಭಾಷೆಗಳಲ್ಲಿ ಜಾಗೃತಿ ಸಾಮಗ್ರಿಗಳನ್ನು ಸಿದ್ಧಪಡಿಸಲಾಗಿದೆ. ತಿರುವಾಂಕೂರು ದೇವಸ್ವಂ ಮಂಡಳಿಯ ಸಮನ್ವಯದೊಂದಿಗೆ ಸಮಗ್ರ ವೈದ್ಯಕೀಯ ಸೌಲಭ್ಯಗಳನ್ನು ವ್ಯವಸ್ಥೆ ಮಾಡಲಾಗಿದೆ’ ಎಂದಿದ್ದಾರೆ.
‘ಪಂಪಾಾದಿಂದ ಸನ್ನಿಧಾನಂಗೆ ಹೋಗುವ ಮಾರ್ಗದಲ್ಲಿ ತುರ್ತು ವೈದ್ಯಕೀಯ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಕೊನ್ನಿ ವೈದ್ಯಕೀಯ ಕಾಲೇಜು ಮೂಲ ಆಸ್ಪತ್ರೆಯಾಗಿ ಕಾರ್ಯನಿರ್ವಹಿಸಲಿದೆ. ಪತ್ತನಂತಿಟ್ಟ ಸಾರ್ವಜನಿಕ ಆಸ್ಪತ್ರೆಯಲ್ಲಿ ತುರ್ತು ಹೃದ್ರೋಗ ಸೌಲಭ್ಯಗಳು ಮತ್ತು ಕ್ಯಾತ್ ಲ್ಯಾಬ್ ಅನ್ನು ಆರಂಭಿಸಲಾಗಿದೆ. ಹೃದಯ ಸಂಬಂಧಿತ ತುರ್ತು ಚಿಕಿತ್ಸೆಗಳಿಗೆ ಆಂಬುಲೆನ್ಸ್‌ಗಳು ಸಹ ಲಭ್ಯವಿರುತ್ತವೆ. ಜತೆಗೆ ಸನ್ನಿಧಾನಂ ಮತ್ತು ಪಂಪಾಾ ನಡುವೆ ವಿಶೇಷ ಆಂಬುಲೆನ್ಸ್‌ ಲಭ್ಯ’ ಎಂದು ಸಚಿವೆ ವೀಣಾ ತಿಳಿಸಿದ್ದಾರೆ.
‘ಎಲ್ಲಾ ಆಸ್ಪತ್ರೆಗಳು ಡಿಫಿಬ್ರಿಲೇಟರ್‌ಗಳು, ವೆಂಟಿಲೇಟರ್‌ಗಳು ಮತ್ತು ಹೃದಯ ಮಾನಿಟರ್‌ಗಳೊಂದಿಗೆ ಸಜ್ಜುಗೊಳಿಸಲಾಗಿದೆ. ಪಂದಳಂ ವಲಿಯ ಕೊಯಿಕ್ಕಲ್ ದೇವಸ್ಥಾನದಲ್ಲಿ ತಾತ್ಕಾಲಿಕ ಔಷಧಾಲಯವನ್ನು ಸ್ಥಾಪಿಸಲಾಗಿದೆ. ವಡಸ್ಸೇರಿಕ್ಕರ ಮತ್ತು ಪತ್ತನಂತಿಟ್ಟದಲ್ಲಿ ಕನಿಷ್ಠ ಒಂದು ಔಷಧ ಅಂಗಡಿ ದಿನದ 24 ಗಂಟೆಗಳ ಕಾಲ ಕಾರ್ಯ ನಿರ್ವಹಿಸಲಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೂರೈಕೆಯಾಗುವ ಆಹಾರಗಳ ಗುಣಮಟ್ಟ ಪರೀಕ್ಷೆಗೆ ಆಹಾರ ಸುರಕ್ಷತಾ ಇಲಾಖೆಯು ವಿಶೇಷ ತಂಡಗಳನ್ನು ರಚಿಸಿದೆ. ಇವರಿಗೆ ಆರೋಗ್ಯ ಕಾರ್ಡ್‌ಗಳನ್ನು ಕಡ್ಡಾಯಗೊಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು