7:17 PM Wednesday4 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

ಶಬರಿಮಲೆ ಯಾತ್ರೆ ಆರಂಭ: ಯಾತ್ರಾರ್ಥಿಗಳು ಮೂಗಿನೊಳಗೆ ನೀರು ಹೋಗದಂತೆ ಎಚ್ಚರ ವಹಿಸಲು ಸೂಚನೆ

16/11/2025, 12:34

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೇರಳದಲ್ಲಿ ಕಳೆದ ಕೆಲ ತಿಂಗಳುಗಳಿಂದ ಪತ್ತೆಯಾಗುತ್ತಿರುವ ‘ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್’ ಎಂಬ ಮಿದುಳು ಜ್ವರ ಪ್ರಕರಣದ ಹಿನ್ನೆಲೆಯಲ್ಲಿ ಕೇರಳ ಸರ್ಕಾರವು ಶಬರಿಮಲೆಯ ವಾರ್ಷಿಕ ಯಾತ್ರೆ ಕೈಗೊಳ್ಳುವವರಿಗೆ ಸೂಚನೆ ನೀಡಿದ್ದು, ಮೂಗಿನೊಳಗೆ ನೀರು ಹೋಗದಂತೆ ಎಚ್ಚರ ವಹಿಸುವಂತೆ ಹೇಳಿದೆ.
ಯಾವುದೇ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿರುವ ತಮ್ಮ ದಾಖಲೆ ಹಾಗೂ ಔಷಧಗಳನ್ನು ಕೊಂಡೊಯ್ಯಬೇಕು. ಯಾತ್ರೆಯ ಸಂದರ್ಭದಲ್ಲಿ ನಿಯಮಿತ ಔಷಧಗಳನ್ನು ನಿಲ್ಲಸಬಾರದು. ಶಬರಿಮಲೆಗೆ ನಡೆಯುವಂತ ಸಂದರ್ಭದಲ್ಲಿ ಒತ್ತಡ ನಿರ್ವಹಣೆಯಾಗಿ ನಡಿಗೆಯಂತ ಲಘು ವ್ಯಾಯಾಮ ಮಾಡುವಂತೆಯೂ ಸಲಹೆ ನೀಡಿದೆ.
‘ಬೆಟ್ಟವನ್ನು ನಿಧಾನವಾಗಿ ಹತ್ತಬೇಕು. ಮಧ್ಯದಲ್ಲಿ ಪುಟ್ಟ ವಿರಾಮ ತೆಗೆದುಕೊಳ್ಳಬೇಕು. ಸುಸ್ತು ಎನಿಸಿದರೆ, ಎದೆ ನೋವು ಕಂಡುಬಂದರೆ ವೈದ್ಯಕೀಯ ನೆರವು ಪಡೆಯಬೇಕು. ತುರ್ತು ಪರಿಸ್ಥಿತಿಯಲ್ಲಿ 04735 203232 ಸಂಖ್ಯೆಯನ್ನು ಸಂಪರ್ಕಿಸಬೇಕು’ ಎಂದು ಕೇರಳ ಸರ್ಕಾರ ಹೇಳಿದೆ.
‘ಕುದಿಸಿದ ನೀರನ್ನೇ ಕುಡಿಯಬೇಕು. ಕೈತೊಳೆಯಲು, ಅಡುಗೆಗೆ, ಹಣ್ಣುಗಳನ್ನು ತೊಳೆಯಲು ಕುದಿಸಿದ ನೀರನ್ನೇ ಬಳಸಬೇಕು. ಹಳಸಿದ ಹಾಗೂ ಹೊರಗೆ ತೆರೆದಿದ್ದ ಆಹಾರಗಳನ್ನು ಸೇವಿಸಬಾರದು. ಬಯಲು ಬಹಿರ್ದೆಸೆ ನಿಷೇಧಿಸಲಾಗಿದೆ. ಶೌಚಾಲಯಗಳನ್ನೇ ಬಳಸಬೇಕು ಹಾಗೂ ನಂತರ ಶುಚಿಯಾಗಿ ಕೈತೊಳೆದುಕೊಳ್ಳಬೇಕು. ತ್ಯಾಜ್ಯಗಳನ್ನು ನಿರ್ದಿಷ್ಟ ಜಾಗದಲ್ಲೇ ಹಾಕಬೇಕು’ ಎಂದು ಸರ್ಕಾರ ಸೂಚಿಸಿದೆ.


‘ಬೆಟ್ಟ ಹತ್ತುವಾಗ ಹಾವು ಕಚ್ಚಿದರೆ ತಕ್ಷಣ ವೈದ್ಯಕೀಯ ನೆರವು ಕೋರಬೇಕು. ಆಸ್ಪತ್ರೆಗಳಲ್ಲಿ ಹಾವು ಕಡಿತ ಔಷಧ ದಾಸ್ತಾನು ಇಡಲಾಗಿದೆ. ಯಾತ್ರಿಕರ ವೈದ್ಯಕೀಯ ನೆರವಿಗಾಗಿ ವಿವಿಧ ವೈದ್ಯಕೀಯ ಕಾಲೇಜುಗಳ ತರಬೇತಿ ಹೊಂದಿದ ಆರೋಗ್ಯ ಕಾರ್ಯಕರ್ತರು ಮತ್ತು ವೈದ್ಯರನ್ನು ನಿಯೋಜಿಸಲಾಗಿದೆ. ಇವರು ಯಾತ್ರೆ ಸಾಗುವ ಮಾರ್ಗದಲ್ಲೇ ಲಭ್ಯರಿರಲಿದ್ದಾರೆ. ದಿನದ 24 ಗಂಟೆಗಳ ಕಾಲ ಪಂಪಾದಲ್ಲಿರುವ ವೈದ್ಯಕೀಯ ಕೇಂದ್ರ ಕೆಲಸ ಮಾಡಲಿದೆ’ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.
ಕನ್ನಡ ಸಹಿತ ವಿವಿಧ ಭಾಷೆಗಳಲ್ಲಿ ಜಾಗೃತಿ ಸಂದೇಶ
‘ಪರ್ವತ ಹತ್ತುವಾಗ ಯಾತ್ರಾರ್ಥಿಗಳು ಯಾವುದೇ ಅಸ್ವಸ್ಥತೆಯನ್ನು ಅನುಭವಿಸಿದರೆ ತಕ್ಷಣ ಹತ್ತಿರದ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯಬೇಕು. ಮಲಯಾಳಂ, ಕನ್ನಡ, ಇಂಗ್ಲಿಷ್, ಹಿಂದಿ, ತಮಿಳು ಹಾಗೂ ತೆಲುಗು ಸೇರಿದಂತೆ ವಿವಿಧ ಭಾಷೆಗಳಲ್ಲಿ ಜಾಗೃತಿ ಸಾಮಗ್ರಿಗಳನ್ನು ಸಿದ್ಧಪಡಿಸಲಾಗಿದೆ. ತಿರುವಾಂಕೂರು ದೇವಸ್ವಂ ಮಂಡಳಿಯ ಸಮನ್ವಯದೊಂದಿಗೆ ಸಮಗ್ರ ವೈದ್ಯಕೀಯ ಸೌಲಭ್ಯಗಳನ್ನು ವ್ಯವಸ್ಥೆ ಮಾಡಲಾಗಿದೆ’ ಎಂದಿದ್ದಾರೆ.
‘ಪಂಪಾಾದಿಂದ ಸನ್ನಿಧಾನಂಗೆ ಹೋಗುವ ಮಾರ್ಗದಲ್ಲಿ ತುರ್ತು ವೈದ್ಯಕೀಯ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಕೊನ್ನಿ ವೈದ್ಯಕೀಯ ಕಾಲೇಜು ಮೂಲ ಆಸ್ಪತ್ರೆಯಾಗಿ ಕಾರ್ಯನಿರ್ವಹಿಸಲಿದೆ. ಪತ್ತನಂತಿಟ್ಟ ಸಾರ್ವಜನಿಕ ಆಸ್ಪತ್ರೆಯಲ್ಲಿ ತುರ್ತು ಹೃದ್ರೋಗ ಸೌಲಭ್ಯಗಳು ಮತ್ತು ಕ್ಯಾತ್ ಲ್ಯಾಬ್ ಅನ್ನು ಆರಂಭಿಸಲಾಗಿದೆ. ಹೃದಯ ಸಂಬಂಧಿತ ತುರ್ತು ಚಿಕಿತ್ಸೆಗಳಿಗೆ ಆಂಬುಲೆನ್ಸ್‌ಗಳು ಸಹ ಲಭ್ಯವಿರುತ್ತವೆ. ಜತೆಗೆ ಸನ್ನಿಧಾನಂ ಮತ್ತು ಪಂಪಾಾ ನಡುವೆ ವಿಶೇಷ ಆಂಬುಲೆನ್ಸ್‌ ಲಭ್ಯ’ ಎಂದು ಸಚಿವೆ ವೀಣಾ ತಿಳಿಸಿದ್ದಾರೆ.
‘ಎಲ್ಲಾ ಆಸ್ಪತ್ರೆಗಳು ಡಿಫಿಬ್ರಿಲೇಟರ್‌ಗಳು, ವೆಂಟಿಲೇಟರ್‌ಗಳು ಮತ್ತು ಹೃದಯ ಮಾನಿಟರ್‌ಗಳೊಂದಿಗೆ ಸಜ್ಜುಗೊಳಿಸಲಾಗಿದೆ. ಪಂದಳಂ ವಲಿಯ ಕೊಯಿಕ್ಕಲ್ ದೇವಸ್ಥಾನದಲ್ಲಿ ತಾತ್ಕಾಲಿಕ ಔಷಧಾಲಯವನ್ನು ಸ್ಥಾಪಿಸಲಾಗಿದೆ. ವಡಸ್ಸೇರಿಕ್ಕರ ಮತ್ತು ಪತ್ತನಂತಿಟ್ಟದಲ್ಲಿ ಕನಿಷ್ಠ ಒಂದು ಔಷಧ ಅಂಗಡಿ ದಿನದ 24 ಗಂಟೆಗಳ ಕಾಲ ಕಾರ್ಯ ನಿರ್ವಹಿಸಲಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೂರೈಕೆಯಾಗುವ ಆಹಾರಗಳ ಗುಣಮಟ್ಟ ಪರೀಕ್ಷೆಗೆ ಆಹಾರ ಸುರಕ್ಷತಾ ಇಲಾಖೆಯು ವಿಶೇಷ ತಂಡಗಳನ್ನು ರಚಿಸಿದೆ. ಇವರಿಗೆ ಆರೋಗ್ಯ ಕಾರ್ಡ್‌ಗಳನ್ನು ಕಡ್ಡಾಯಗೊಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು