9:56 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

Crime News | ಮೂಡುಬಿದರೆ: ಅಕ್ರಮ ಗೋಸಾಗಾಟ; ಮೂವರು ಆರೋಪಿಗಳ ಬಂಧನ

17/11/2025, 11:59

ಮೂಡುಬಿದರೆ(reporterkarnataka.com): ವಾಹನವೊಂದರಲ್ಲಿ ಅಕ್ರಮವಾಗಿ 3 ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಮೂಡಬಿದ್ರೆ ತಾಲೂಕು ಹೊಸ್ಮಾರು ನೆಲ್ಲಿಕಾರು ಕಡೆಯಿಂದ ಆರೋಪಿಗಳಾದ ಮನ್ಸೂರ್ ಅದ್ಯಪಾಡಿ ಅಲಿಯಾಸ್ ಮೊಹಮ್ಮದ್ ಮನ್ಸೂರ್, ಮೊಹಮ್ಮದ್ ಅಶ್ಫಕ್, ಅಬ್ದುಲ್ ಮೊಹಮ್ಮದ್ ನಿಶಾಮ್ ಮತ್ತು ಇತರರು ಟಾಟಾ ಎಸಿ ಕಂಟೈನರ್ ವಾಹನವೊಂದರಲ್ಲಿ ಅಕ್ರಮವಾಗಿ 3 ಜಾನುವಾರುಗಳನ್ನು ಸಾಗಾಟ ಮಾಡಿಕೊಂಡು ಬರುತ್ತಿದ್ದು, ಅದರಲ್ಲಿ ಮನ್ಸೂರ್ ಅದ್ಯಪಾಡಿ ಅಲಿಯಾಸ್ ಮೊಹಮ್ಮದ್ ಮನ್ಸೂರ್, ಮೊಹಮ್ಮದ್ ಅಶ್ವದ್, ಮತ್ತು ಅಬ್ದುಲ್ ಮೊಹಮ್ಮದ್ ನಿಶಾಮ್ ಎಂಬುವರನ್ನು ವಶಕ್ಕೆ ಪಡೆದಿರುತ್ತೇವೆ. ಇವರ ವಿರುದ್ದ ಮೂಡಬಿದ್ರೆ ಅಪರಾಧ ಕ್ರಮಾಂಕ 178/2025 ಕಲಂ 111 ಬಿ.ಎನ್.ಎಸ್, 11(1)(ಡಿ) ಪ್ರಾಣಿ ಹಿಂಸಾ ಪ್ರತಿಬಂಧಕ ಕಾಯ್ದೆ ಮತ್ತು ಕಲಂ: 4, 5, 7, 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಆಧ್ಯಾದೇಶ ಕಾಯ್ದೆಯಂತೆ ಪ್ರಕರಣ ದಾಖಲಾಗಿರುತ್ತದೆ. 1 ನೇ ಆರೋಪಿ ಮನ್ಸೂರ್ ಅದ್ಯಪಾಡಿ ಅಲಿಯಾಸ್ ಮೊಹಮ್ಮದ್ ಮನ್ಸೂರ್ ಮೇಲೆ ಒಟ್ಟು 29 ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದು, ಇದು 30ನೇ ಪ್ರಕರಣವಾಗಿರುತ್ತದೆ. 2ನೇ ಆರೋಪಿ ಮೊಹಮ್ಮದ್ ಅಶ್ವದ್ ನ ಮೇಲೆ ಉಳ್ಳಾಲದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಪ್ರಕರಣ ದಾಖಲಾಗಿದ್ದು, ಇದು 2ನೇ ಪ್ರಕರಣವಾಗಿರುತ್ತದೆ. ಹಾಗೂ 3ನೇ ಆರೋಪಿ ಅಬ್ದುಲ್ ಮೊಹಮ್ಮದ್ ನಿಶಾಮ್ ನ ವಿರುದ್ದ ಇದು ಮೊದಲನೇ ಪ್ರಕರಣವಾಗಿರುತ್ತದೆ. ಆರೋಪಿಗಳ ವಿರುದ್ದ ಸಂಘಟಿತ ಅಪರಾಧ ಪ್ರಕರಣದಂತೆ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು