6:39 PM Monday17 - November 2025
ಬ್ರೇಕಿಂಗ್ ನ್ಯೂಸ್
Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಗಾದಿಗಾಗಿ ಕಿತ್ತಾಟಕ್ಕೆ ಉಪಶಮನ: ದೆಹಲಿಯಲ್ಲಿ ಒಟ್ಟಿಗೆ ಭೋಜನ ಸವಿದ ಸಿಎಂ, ಡಿಸಿಎಂ, ಸಂಪುಟ ಸಹೋದ್ಯೋಗಿಗಳು

17/11/2025, 18:34

ಹೊಸದಿಲ್ಲಿ(reporterkarnataka.com): ರಾಜ್ಯದ ಗದ್ದುಗೆಗಾಗಿ ನಡೆಯುತ್ತಿದ್ದ ಜಂಗೀ ಕುಸ್ತಿ ತಕ್ಕಮಟ್ಟಿಗೆ ಉಪಶಮನಗೊಂಡಿದ್ದು, ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಭೋಜನಕೂಟದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಾಲ್ಗೊಂಡಿದ್ದಾರೆ.


ರಾಜ್ಯದಲ್ಲಿ ನವೆಂಬರ್ ಕ್ರಾಂತಿ ನಡೆಯುತ್ತದೆ ಎಂದು ಪ್ರತಿಪಕ್ಷ ಬಿಜೆಪಿಯ ನಾಯಕರು ಸೆಪ್ಟೆಂಬರ್‌ ತಿಂಗಳಿನಿಂದಲೇ ಕೂಗೆಬ್ಬಿಸುತ್ತಿದ್ದರು. ಮುಖ್ಯಮಂತ್ರಿ ಕುರ್ಚಿಯ ಮೇಲೆ ಕಣ್ಣಿಟ್ಟಿದ್ದ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಕೂಡ ಮುಖ್ಯಮಂತ್ರಿ ಗಾದಿಗಾಗಿ ದೆಹಲಿ ಮಟ್ಟದಲ್ಲಿ ಸಾಕಷ್ಟು ಪ್ರಭಾವ ಬೀರಿದ್ದರು. ಆದರೆ, ಸದ್ಯದ ಸ್ಥಿತಿಯಲ್ಲಿ ಮುಖ್ಯಮಂತ್ರಿಯವರನ್ನು ಬದಲಾಯಿಸಲು ಹೈಕಮಾಂಡ್ ಬಳಿ ಯಾವುದೇ ಪ್ರಬಲವಾದ ಕಾರಣಗಳಿಲ್ಲ ಮಾತ್ರವಲ್ಲದೆ ಸಿದ್ದರಾಮಯ್ಯ ಅವರ ಜನಪ್ರಿಯತೆಗೆ ಯಾವುದೇ ಕುಂದು ಬಾರದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಷಯವನ್ನು ಕಾಂಗ್ರೆಸ್ ಹೈಕಮಾಂಡ್ ಬದಿಗೆ ಸರಿಸಿದೆ ಎನ್ನಲಾಗಿದೆ.
ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರೆ ಸಚಿವರು ಮತ್ತು ಶಾಸಕರುಗಳ ಜೊತೆಗೆ ದೆಹಲಿಯ ಕರ್ನಾಟಕ ಭವನದಲ್ಲಿ ಮಧ್ಯಾಹ್ನದ ಉಪಹಾರ ಸವಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು