ಇತ್ತೀಚಿನ ಸುದ್ದಿ
Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ ಮುಳುಗಿ ದಾರುಣ ಸಾವು
17/11/2025, 18:40
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ಕಾಲುವೆಗೆ ಈಜಲು ಹೋದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಹಾಸನ ಜಿಲ್ಲೆಯ ಕೊಣನೂರು ಗ್ರಾಮದಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿರುವ ಲಕ್ಷ್ಮಿಪುರ ಗ್ರಾಮದ ಹರೀಶ್ ಅವರ ಮಗ ಲವ ಎಂಬವ ಸಾವಿಗೀಡಾ ಬಾಲಕ. ಈತ ಬೆಟ್ಟದಪುರ ಗ್ರಾಮಕ್ಕೆ ತನ್ನ ಅತ್ತೆ ಪುಟ್ಟಮ್ಮ ಅವರ ಮನೆಗೆ ಹಬ್ಬಕ್ಕೆ ಬಂದಿದ್ದು ಪಕ್ಕದಲ್ಲಿ ಇರುವ ಕರಡಿ ಲಕ್ಕನಕೆರೆ ಏತ ನೀರಾವರಿ ಕಾಲುವೆಗೆ ಈಜಲು ಹೋಗಿ ಮೃತಪಟ್ಟಿದ್ದಾನೆ.
ಲವನ ತಂದೆ ತಾಯಿ ಈ ಹಿಂದೆ ಮೃತ ಪಟ್ಟಿದ್ದು ಅನಾಥನಾಗಿದ್ದ ಈತ ಕೂಡ ಈಜಲು ಹೋಗಿ ದುರ್ಮರಣ ಹೊಂದಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಮೃತ ಲವನ ಮಾವ ಸಿದ್ದರಾಮ ಬೆಟ್ಟದಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಳುಗು ಈಜು ತಜ್ಞರನ್ನು ಕರೆಸಿ, ಶವವನ್ನು ಹೊರಗೆ ತೆಗೆದು ಪಿರಿಯಾಪಟ್ಟಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.












