12:35 AM Sunday19 - April 2026
ಬ್ರೇಕಿಂಗ್ ನ್ಯೂಸ್
ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

Kodagu | ಸಿದ್ದಾಪುರ: ಮಹಿಳೆಯಿಂದ ಮೊಬೈಲ್ ಕದ್ದ ಆರೋಪಿಗಳಿಬ್ಬರು ಅಂದರ್

18/11/2025, 16:06

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಬಸ್ ತಂಗುದಾಣದಲ್ಲಿ ನಿಂತಿದ್ದ ಮಹಿಳೆಯ ಕೈಯಲ್ಲಿದ್ದ ಮೊಬೈಲ್ ಕಸಿದು ಪರಾರಿ ಆಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಘಟ್ಟದಹಳ್ಳ ಪಂಜರಿ ಎರವರ ಸಿದ್ದಯ್ಯ (20) ಮತ್ತು ಪಂಜರಿ ಎರವರ ಮಾದಪ್ಪ (26) ಬಂಧಿತ ಆರೋಪಿ ಗಳಾಗಿದ್ದಾರೆ.
ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪುಲಿಯೇರಿ ಗ್ರಾಮದ ಶೈನಿ ಡಿ. ಎಂಬುವವರು ನ. 15ರಂದು ಸಂಜೆ ಅಂದಾಜು 5 ಗಂಟೆ ಸಮಯದಲ್ಲಿ ಬಾಡಗ ಬಾಣಂಗಾಲ ಗ್ರಾಮದ ಮಾರ್ಗೋಲ್ಲಿ ಟಾಟಾ ಕಾಫಿ ಎಸ್ಟೇಟ್ ಸಮೀಪದ ಜಂಕ್ಷನ್ ಬಸ್ ತಂಗುದಾಣದಲ್ಲಿ ಮಕ್ಕಳೊಂದಿಗೆ ಬಸ್ ಗಾಗಿ ಕಾಯುತ್ತಾ ನಿಂತಿದ್ದಾಗ ಇವರ
ಕೈಯಲ್ಲಿದ್ದ ಮೊಬೈಲ್ ಅನ್ನು ಆರೋಪಿಗಳು ಕಿತ್ತು ಕೊಂಡು ಪರಾರಿಯಾಗಿದ್ದರು. ಈ ಕುರಿತು ಶೈನಿ ಡಿ ಅವರು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಈ ಪ್ರಕರಣದ ಆರೋಪಿಯ ಪತ್ತೆಗಾಗಿ ಮಡಿಕೇರಿ ಪೊಲೀಸ್ ಉಪ ವಿಭಾಗ ಡಿ.ಎಸ್.ಪಿ. ಸೂರಜ್, ಮಡಿಕೇರಿ ನಗರ ವೃತ್ತ ನಿರೀಕ್ಷಕರಾದ ಪಿ.ಕೆ. ರಾಜು, ಸಿದ್ದಾಪುರ PSI ಮಂಜುನಾಥ್, ಠಾಣೆಯ ಅಪರಾಧ ಪತ್ತೆ ಸಿಬ್ಬಂದಿಗಳು ಮತ್ತು ತಾಂತ್ರಿಕ ಸಿಬ್ಬಂದಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ನ. 17ರಂದು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಗಳು ಮಹಿಳೆಯಿಂದ ಕಳವು ಮಾಡಿದ್ದ ಮೊಬೈಲ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು