4:38 AM Friday16 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

Kodagu | ಸಿದ್ದಾಪುರ: ಮಹಿಳೆಯಿಂದ ಮೊಬೈಲ್ ಕದ್ದ ಆರೋಪಿಗಳಿಬ್ಬರು ಅಂದರ್

18/11/2025, 16:06

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಬಸ್ ತಂಗುದಾಣದಲ್ಲಿ ನಿಂತಿದ್ದ ಮಹಿಳೆಯ ಕೈಯಲ್ಲಿದ್ದ ಮೊಬೈಲ್ ಕಸಿದು ಪರಾರಿ ಆಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಘಟ್ಟದಹಳ್ಳ ಪಂಜರಿ ಎರವರ ಸಿದ್ದಯ್ಯ (20) ಮತ್ತು ಪಂಜರಿ ಎರವರ ಮಾದಪ್ಪ (26) ಬಂಧಿತ ಆರೋಪಿ ಗಳಾಗಿದ್ದಾರೆ.
ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪುಲಿಯೇರಿ ಗ್ರಾಮದ ಶೈನಿ ಡಿ. ಎಂಬುವವರು ನ. 15ರಂದು ಸಂಜೆ ಅಂದಾಜು 5 ಗಂಟೆ ಸಮಯದಲ್ಲಿ ಬಾಡಗ ಬಾಣಂಗಾಲ ಗ್ರಾಮದ ಮಾರ್ಗೋಲ್ಲಿ ಟಾಟಾ ಕಾಫಿ ಎಸ್ಟೇಟ್ ಸಮೀಪದ ಜಂಕ್ಷನ್ ಬಸ್ ತಂಗುದಾಣದಲ್ಲಿ ಮಕ್ಕಳೊಂದಿಗೆ ಬಸ್ ಗಾಗಿ ಕಾಯುತ್ತಾ ನಿಂತಿದ್ದಾಗ ಇವರ
ಕೈಯಲ್ಲಿದ್ದ ಮೊಬೈಲ್ ಅನ್ನು ಆರೋಪಿಗಳು ಕಿತ್ತು ಕೊಂಡು ಪರಾರಿಯಾಗಿದ್ದರು. ಈ ಕುರಿತು ಶೈನಿ ಡಿ ಅವರು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಈ ಪ್ರಕರಣದ ಆರೋಪಿಯ ಪತ್ತೆಗಾಗಿ ಮಡಿಕೇರಿ ಪೊಲೀಸ್ ಉಪ ವಿಭಾಗ ಡಿ.ಎಸ್.ಪಿ. ಸೂರಜ್, ಮಡಿಕೇರಿ ನಗರ ವೃತ್ತ ನಿರೀಕ್ಷಕರಾದ ಪಿ.ಕೆ. ರಾಜು, ಸಿದ್ದಾಪುರ PSI ಮಂಜುನಾಥ್, ಠಾಣೆಯ ಅಪರಾಧ ಪತ್ತೆ ಸಿಬ್ಬಂದಿಗಳು ಮತ್ತು ತಾಂತ್ರಿಕ ಸಿಬ್ಬಂದಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ನ. 17ರಂದು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಗಳು ಮಹಿಳೆಯಿಂದ ಕಳವು ಮಾಡಿದ್ದ ಮೊಬೈಲ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು