8:34 AM Saturday21 - September 2024
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,…

ಇತ್ತೀಚಿನ ಸುದ್ದಿ

ಕಾರ್ಕಳ: ಕೇಂದ್ರ ಸರಕಾರದ ಇ-ಶ್ರಮ ಯೋಜನೆ; ಅಸಂಘಟಿತ ಕಾರ್ಮಿಕ ಕಾರ್ಡ್  ಉಚಿತ ನೋಂದಾವಣೆ

01/09/2021, 08:46

ಕಾರ್ಕಳ(reporterkarnataka.com):ಮನೆ ಮನೆಗೂ ತಲುಪಲಿ ಕೇಂದ್ರ ಸರಕಾರದ ಇ-ಶ್ರಮ ಯೋಜನೆ ಉಡುಪಿಯ ಯೂತ್ ಫಾರ್ ಸೇವಾದ ಆಶ್ರಯದಲ್ಲಿ ಯುವವಾಹಿನಿ(ರಿ) ಕಾರ್ಕಳ ಘಟಕದ ಸಹಕಾರ ಮತ್ತು ಸೇವಾ ಸಿಂಧು ಸಂಯೋಜನೆಯಲ್ಲಿ ಕಾರ್ಕಳದ ಎಲ್ಲ ಫಲಾನುಭವಿಗಳಿಗೆ ಕೇಂದ್ರ ಸರಕಾರದ ಇ-ಶ್ರಮ ಯೋಜನೆ ಅಸಂಘಟಿತ ಕಾರ್ಮಿಕ ಕಾರ್ಡ್  ಉಚಿತ ನೋಂದಾವಣೆ ಕಾರ್ಯಕ್ರಮ ರಾಮಪ್ಪ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬಾಲಾಜಿ ಶಿಬಿರದ ಗುರುಗಳಾದ ಬಾಲಕೃಷ್ಣ ಹೆಗ್ಡೆ ಭಾರತಂಬೆಗೆ ಹೂವು ಹಾಕಿ, ದೀಪ ಪ್ರಜ್ವಲನೆಯ ಮೂಲಕ ಚಾಲನೆ ನೀಡಿದರು. ಇ-ಶ್ರಮ ಯೋಜನೆಯ ರೂಪುರೇಷೆಗಳನ್ನು ಗಣೇಶ ದಿಶಾನಿ ಅವರು ವಿವರಿಸಿದರು. ಕಾರ್ಯಕ್ರಮದ ನಿರೂಪಣೆ ಯೂಥ್ ಫಾರ್ ಸೇವಾ ತಂಡದ ರಮಿತಾ ಶೈಲೆಂದ್ರ ರಾವ್ ಮಾಡಿದರು. ಯುವ ವಾಹಿನಿ ಘಟಕದ ಅಧ್ಯಕ್ಷ ಗಣೇಶ್ ಸಾಲಿಯಾನ್ ಬಂಧಿಸಿದರು.

ವೇದಿಕೆಯಲ್ಲಿ ಕಾರ್ಕಳ ಪುರಸಭೆ ಸದಸ್ಯರಾದ ಮೀನಾಕ್ಷಿ, ಸೇವಾ ಸಿಂಧೂ ಅನಿಲ್ ಕಾಮತ್ ಹಾಗೂ ಕಾರ್ಕಳ ಕಾರ್ಮಿಕ ಇಲಾಖೆಯ

ಮೋಹನ್ ಶೆಣೈ ಅವರು ಉಪಸ್ಥಿತರಿದ್ದರು, ಕಾರ್ಯಕ್ರಮದಲ್ಲಿ ಯೂತ್ ಫಾರ್ ಸೇವಾ ತಂಡದ ಸದಸ್ಯರು, ಯುವ ವಾಹಿನಿ ತಂಡದ ಸದಸ್ಯರು ಹಾಗೂ ಕಾರ್ಕಳ ಕಾರ್ಕಳದ ಸುಮಾರು 780 ಕ್ಕೂ ಮಿಕ್ಕಿದ ಫಲಾನುಭವಿ ಫಲಾನುಭವಿಗಳು ಇದರ ಸದುಪಯೋಗವನ್ನು ಪಡೆದುಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು