9:05 PM Wednesday19 - November 2025
ಬ್ರೇಕಿಂಗ್ ನ್ಯೂಸ್
ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;…

ಇತ್ತೀಚಿನ ಸುದ್ದಿ

ಸುಖಾನಂದ ಶೆಟ್ಟಿ ಕೊಲೆ ಪ್ರಕರಣ: 19 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

19/11/2025, 20:57

ಮಂಗಳೂರು(reporterkarnataka.com):ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಬಳಿ ನಡೆದ ಸುಖಾನಂದ ಶೆಟ್ಟಿ ಕೊಲೆ ಪ್ರಕರಣದ ಆರೋಪಿಯಾಗಿ ತಲೆ ಮರೆಸಿಕೊಂಡಿದ್ದ ಅಬ್ದುಲ್ ಸಲಾಂ ಅಡ್ಡೂರು ಎಂಬಾತನನ್ನು 19 ವರ್ಷದ ಬಳಿಕ ಬಂಧಿಸಲಾಗಿದೆ.
2006, ಡಿಸೆಂಬರ್ 1ರಂದು ಹೊಸಬೆಟ್ಟು ಬಳಿ ಸುಖಾನಂದ್ ಶೆಟ್ಟಿ ಎಂಬವರನ್ನು ಕಬೀರ್ ಹಾಗೂ ಆತನ ಸಹಚರರು ಕೊಲೆ ಮಾಡಿ ಪರಾರಿಯಾಗಿದ್ದರು. ಪ್ರಕರಣದ ಪ್ರಮುಖ ಆರೋಪಿ ಕಬೀರ್ ಎಂಬಾತನಿಗೆ ಲತೀಫ್ ಅಲಿಯಾಸ್ ಅಡ್ಡೂರು ಲತೀಫ್ ಹಾಗೂ ಪ್ರಸ್ತುತ ಕಿನ್ನಿಪದವು ನಿವಾಸಿ ಅಬ್ದುಲ್ ಸಲಾಂ ಅಡ್ಡೂರು ಎಂಬ ಸಹೋದರರು ಅಡ್ಡೂರ್ ಟಿಬೇಟ್ ಕಾಲೋನಿಯಲ್ಲಿರುವ ಮನೆಯಲ್ಲಿ ಆಶ್ರಯ ನೀಡಿ 2 ದಿನ ಮನೆಯಲ್ಲಿರಿಸಿಕೊಂಡು ಪೊಲೀಸರಿಂದ ತಪ್ಪಿಸಿ ತಲೆಮರೆಸಿಕೊಳ್ಳಲು ಸಹಕಾರ ನೀಡಿದ್ದರು. ನಂತರ ಕಬೀರ್ ನನ್ನು ವಾಹನದಲ್ಲಿ ಕೇರಳದ ಕಾಸರಗೋಡು ಬಳಿ ಬಿಟ್ಟು ನಂತರ ತಲೆ ಮರೆಸಿಕೊಂಡಿದ್ದರು. ಅಬ್ದುಲ್ ಸಲಾಂ ಅಡ್ಡೂರು ಕೃತ್ಯ ನಡೆದ ಮೂರು ತಿಂಗಳ ಬಳಿಕ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದ. ಸದ್ರಿ ಆರೋಪಿತನು ಪ್ರಕರಣದಲ್ಲಿ ದಸ್ತಗಿರಿಯಾಗದೇ ತಲೆಮರೆಸಿಕೊಂಡಿದ್ದರಿಂದ ಆರೋಪಿತನ ಮೇಲೆ ದೋಷಾರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಇದೀಗ
ಅಬ್ದುಲ್ ಸಲಾಂ ಅಡ್ಡೂರು
ಎಂಬಾತನು ಸುಮಾರು 19 ವರ್ಷಗಳಿಂದ ದಸ್ತಗಿರಿಗೆ ಸಿಗದೇ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ಇರುವುದರಿಂದ ಸದ್ರಿ ಆರೋಪಿಯ ಬಜಪೆ ಠಾಣಾ ವ್ಯಾಪ್ತಿಯಲ್ಲಿ ಇರುವ ಬಗ್ಗೆ ಮಾಹಿತಿಯನ್ನು ಕಲೆ ಹಾಕಿ
ನವಂಬರ್ 18 ರಂದು ಸಂಜೆ ಬಜಪೆ ಕಿನ್ನಿಪದವು ಬಳಿ ಪೊಲೀಸರು ಬಂಧಿಸಿದ್ದಾರೆ.
ಈತನು 2007ನೇ ಇಸವಿಯಲ್ಲಿ ಪಾಸ್ ಪೋರ್ಟ್ ಮಾಡಿ ಕೆಲವು ವರ್ಷಗಳ ಕಾಲ ವಿದೇಶದಲ್ಲಿ ತಲೆಮರೆಸಿಕೊಂಡು ಇತ್ತೀಚಿಗೆ ವಾಪಸ್ಸು ಬಂದಿದ್ದಾನೆ. ಈತನು ಅಡ್ಡೂರಿನಲ್ಲಿರುವ ತನ್ನ ಮನೆಯನ್ನು ನೆಲಸಮಗೊಳಿಸಿ ಅಲ್ಲಿಂದ ಬಜಪೆಯ ಕಿನ್ನಿಪದವಿನ ಬಾಡಿಗೆ ಮನೆಯಲ್ಲಿ ವಾಸ ಮಾಡಿಕೊಂಡಿದ್ದ. ಈತನ ಸಹೋದರ ಲತೀಫ್ ಅಲಿಯಾಸ್ ಅಡ್ಡೂರು ಲತೀಫ್ ಈತನು ವಿದೇಶದಲ್ಲಿ ತಲೆಮರೆಸಿಕೊಂಡಿರುತ್ತಾನೆ. ಈ ಪ್ರಕರಣದಲ್ಲಿ 16 ಆರೋಪಿಗಳನ್ನು ಈ ಹಿಂದೆ ಬಂದಿಸಿದ್ದು ಉಳಿದ 11 ಜನ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.
ಈತನ ಮೇಲೆ ಬಜಪೆ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದ್ದು ಈತನ ಮೇಲೆ ಬಜಪೆ ಪೊಲೀಸ್ ಠಾಣೆಯಲ್ಲಿ ರೌಡಿ ಹಾಳೆಯನ್ನು ತೆರೆಯಲಾಗಿದೆ. ಈತನ ಮೇಲೆ ನ್ಯಾಯಾಲಯದಿಂದ ಹಲವಾರು ಬಾರಿ ವಾರಂಟ್ ಗಳನ್ನು ಹೊರಡಿಸಿದ್ದು ಸದ್ರಿ ಆರೋಪಿಯು ಸುಮಾರು 19 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ಇದ್ದುದರಿಂದ ಈತನ ವಿರುದ್ಧ ಠಾಣೆಯಲ್ಲಿ ಕಲಂ 209 ಬಿಎನ್.ಎಸ್ ರಂತೆ ಪ್ರಕರಣವನ್ನು ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿ ಪತ್ತೆಯ ಬಗ್ಗೆ ಸಹಾಯಕ ಪೊಲೀಸ್ ಆಯುಕ್ತರು (ಉತ್ತರ ಉಪ ವಿಭಾಗ) ಶ್ರೀಕಾಂತ್ ಕೆ ರವರ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕರಾದ ಪ್ರಮೋದ್ ಕುಮಾರ್ ಪಿ, ಪಿಎಸ್.ಐ ರಘುನಾಯಕ್ ಹಾಗೂ ಠಾಣಾ ಸಿಬ್ಬಂದಿಗಳಾದ ಅಣ್ಣಪ್ಪ, ಅಜಿತ್ ಮ್ಯಾಥ್ಯೂ, ರಾಜೇಂದ್ರ ಪ್ರಸಾದ್, ವಿನೋದ್ ನಾಯ್ಕ್, ಸುನೀಲ್ ಕುಸನಾಳ ಪತ್ತೆಯ ಬಗ್ಗೆ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು