11:14 PM Wednesday19 - November 2025
ಬ್ರೇಕಿಂಗ್ ನ್ಯೂಸ್
ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌…

ಇತ್ತೀಚಿನ ಸುದ್ದಿ

ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

19/11/2025, 23:05

ಬೆಂಗಳೂರು(reporterkarnataka.com):ಡಾ.ಬಿ.ಆರ್‌.ಅಂಬೇಡ್ಕರ್‌ಗೆ ಕಾಂಗ್ರೆಸ್‌ ಮಾಡಿದ ಅನ್ಯಾಯಗಳ ಬಗ್ಗೆ ತಿಳಿಸಲು ಭೀಮ ಸ್ಮರಣೆ ಕಾರ್ಯಕ್ರಮ ಮಾಡಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ತಿಳಿಸಿದರು.
ಕಾರ್ಯಕ್ರಮದ ಕುರಿತು ಪೂರ್ವಭಾವಿ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್‌ 26ರಿಂದ ಡಿಸೆಂಬರ್‌ 6ರವರೆಗೆ ಭೀಮ ಸ್ಮರಣೆ ಕಾರ್ಯಕ್ರಮ ಮಾಡಲಾಗುತ್ತಿದೆ. ಡಾ.ಬಿ.ಆರ್‌.ಅಂಬೇಡ್ಕರ್‌ ಅವರಿಗೆ ಕಾಂಗ್ರೆಸ್‌ ಮಾಡಿದ ಅನ್ಯಾಯ ಹಾಗೂ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಾಬಾ ಸಾಹೇಬರ ಇತಿಹಾಸ ಸ್ಮರಿಸಲು ಮಾಡಿದ ಕೆಲಸಗಳ ಬಗ್ಗೆ ಜಾಗೃತಿ ಮೂಡಿಸಲಿದ್ದೇವೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಕಸ ಗುಡಿಸಲು ಯಂತ್ರ ಖರೀದಿ ಮಾಡುತ್ತಿದ್ದು, ಅದರಲ್ಲೂ ಲೂಟಿ ಹೊಡೆಯುವ ಕೆಲಸವನ್ನು ಕಾಂಗ್ರೆಸ್‌ ಮಾಡುತ್ತಿದೆ. ಒಂದು ಯಂತ್ರಕ್ಕೆ ಎರಡೂವರೆಗೆ ಕೋಟಿ ರೂ. ವೆಚ್ಚವಿದೆ. ವಾಹನ ನಿರ್ವಹಣೆ, ಸಂಬಳ ಸೇರಿದರೂ 5 ಲಕ್ಷ ರೂ. ಆಗುತ್ತದೆ. ಆದರೆ ಇದಕ್ಕಾಗಿ 618 ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಸರ್ಕಾರವೇ ಖರೀದಿ ಮಾಡಿದರೆ 308 ಕೋಟಿ ರೂ. ಖರ್ಚಾಗುತ್ತದೆ. ಇದು ಲೂಟಿ ಹೊಡೆಯುವ ಸ್ಕೀಮ್‌ ಎಂದು ಹೇಳಿದರು.
ಇಷ್ಟು ಹಣ ಪೋಲು ಮಾಡುವ ಬದಲು ಕಸದ ಲಾರಿಗಳನ್ನು ಸಿದ್ಧಪಡಿಸಲಿ. ಸಂಗ್ರಹಿಸುವ ಕಸವನ್ನೇ ವಿಲೇವಾರಿ ಮಾಡಲು ಲಾರಿಗಳಿಲ್ಲ. ಜನರ ಮೇಲೆ ಈಗಾಗಲೇ ಹಲವು ತೆರಿಗೆ ಹಾಕಿದ್ದು, ಈಗ ಜನರ ಅದೇ ಹಣವನ್ನು ಲೂಟಿ ಮಾಡಲಾಗುತ್ತಿದೆ ಎಂದರು.
ಜಯನಗರದಲ್ಲಿ ಹಗಲಿನಲ್ಲೇ ಲೂಟಿ ಮಾಡಲಾಗುತ್ತಿದೆ. ಬ್ಯಾಂಕುಗಳಲ್ಲೇ ಜನರ ಹಣಕ್ಕೆ ರಕ್ಷಣೆ ಇಲ್ಲ. ಇನ್ನು ವಿಧಾನಸೌಧದಲ್ಲೇ ಕಳ್ಳತನವಾದರೂ ಅಚ್ಚರಿ ಇಲ್ಲ. ಪೊಲೀಸ್‌ ಅಧಿಕಾರಿಗಳು ಲೂಟಿ ಮಾಡುವುದರಲ್ಲಿ ನಿರತರಾಗಿದ್ದಾರೆ. ಲೂಟಿ ಮಾಡುವುದು ಬ್ರ್ಯಾಂಡ್‌ ಬೆಂಗಳೂರಿನ ಒಂದು ಭಾಗ ಎಂದರು.
ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಇತರೆ ನಾಯಕರು ದೆಹಲಿಗೆ ಹೋಗಿದ್ದಾರೆ. ಆದರೂ ಸಿಎಂ ಬದಲಾವಣೆ ಆಗುತ್ತಿಲ್ಲ. ಸಿದ್ದರಾಮಯ್ಯ ಕುರ್ಚಿ ಬಿಡುವುದಿಲ್ಲ. ಆದರೆ ಡಿ.ಕೆ.ಶಿವಕುಮಾರ್‌ ಅವರಿಗೆ ಸಮಯ ಸರಿ ಇಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು