12:46 PM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

Mangaluru | ಬೀದಿ ನಾಯಿಗಳ ಹಾವಳಿ: ಪಾಲಿಕೆಗೆ ವರದಿ ನೀಡಲು ಸೂಚನೆ

20/11/2025, 18:55

ಮಂಗಳೂರು(reporterkarnataka.com): ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಮುಖ್ಯಸ್ಥರು ತಮ್ಮ ಸಂಸ್ಥೆಯ ಆವರಣದಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ ಅದನ್ನು ಪರಿಶೀಲಿಸಿ ಮುಂದಿನ 5 ದಿನಗಳೊಳಗಾಗಿ ಅದರ ಸಂಖ್ಯೆಯನ್ನು ಲೆಕ್ಕ ಮಾಡಿ ತಿಳಿಸಬೇಕು.
ತಮ್ಮ ಸಂಸ್ಥೆಯ ಆವರಣದಲ್ಲಿ ಬೀದಿ ನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರದೇಶ ನಿಯಂತ್ರಿಸಲು ಕ್ರಮ ವಹಿಸಬೇಕು. ನಗರ ಸ್ಥಳೀಯ ಸಂಸ್ಥೆಯಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಸಹಕರಿಸಲು ಹಾಗೂ ಅವುಗಳ ಪ್ರವೇಶ ನಿರ್ಬಂಧಿಸುವುದನ್ನು ಮೇಲ್ವಿಚಾರಣೆ ಮಾಡಲು ಸಂಸ್ಥೆ ವತಿಯಿಂದ ಒಬ್ಬ ಜವಾಬ್ದಾರಿಯುತ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಬೇಕು. ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಪುನ: ನಾಯಿಗಳು ವಾಸ ಮಾಡಲು ಅವಕಾಶ ಕೊಟ್ಟಲ್ಲಿ ಅವನ್ನು ಸ್ಥಳಾಂತರಿಸುವ ವೆಚ್ಚವನ್ನು ತಮ್ಮ ಸಂಸ್ಥೆಯಿಂದಲೇ ವಸೂಲಿ ಮಾಡಲಾಗುತ್ತದೆ. ಸರ್ವೋಚ್ಚ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದ್ದಲ್ಲಿ ನ್ಯಾಯಾಲಯದ ಆದೇಶದಂತೆ ತಮ್ಮ ವಿರುದ್ದ ಕಾನೂನು ಕ್ರಮ ವಹಿಸಲಾಗುತ್ತದೆ ಎಂದು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು