6:15 AM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಕೂಡ್ಲಿಗಿಯಲ್ಲಿ ಸರ್ವಂ ಕೃಷ್ಣಮಯ: ಮಕ್ಕಳಿಗೆ ವಾಸುದೇವನ ವೇಷ ತೊಡಿಸಿ ಸಂಭ್ರಮಿಸಿದ ಭಕ್ತ ಜನ

01/09/2021, 16:22

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಕೂಡ್ಲಿಗಿ ತಾಲೂಕಿನ ಬಹುತೇಕ ಕಡೆ ಕೃಷ್ಣ ದೇವನ ಪರ್ವ ಜರುಗಿದೆ.ಕೂಡ್ಲಿಗಿ ಪಟ್ಟಣದ ಶ್ರೀವೆಂಕಟೇಶ್ವರ ದೇವಸ್ಥಾನ ಮತ್ತು ಶ್ರೀಕೊತ್ತಲಾಂಜನೇಯ ದೇವಸ್ಥಾನ, ಬಂಡೇ ಬಸಾಪುರ ತಾಂಡದ ಶ್ರೀವಿಠಲದೇವರ ದೇವಸ್ಥಾನದಲ್ಲಿ, ಬೊಪ್ಪಲಾಪುರ ಗ್ರಾಮದಲ್ಲಿ ಶ್ರೀಕೃಷ್ಣ ನ ವಿಶೇಷ ಆರಾಧನೆ ಜರುಗಿತು.

ಭಕ್ತರು ಶ್ರೀಕೃಷ್ಣಲೀಲೆಗಳನ್ನು ಸಾರುವ ವೇಷಗಳನ್ನು ತಮ್ಮ ಮಕ್ಕಳಿಗೆ ತೊಡಿಸಿ ಕೃಷ್ಣನನ್ನು ಕಂಡು ನಲಿದರು. ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ದೇವಸ್ಥಾನಗಳಲ್ಲಿ ಶ್ರೀಕೃಷ್ಣ ದೇವನ ಆರಾಧನೆ ಭರ್ಜರಿ ನಡೆಯಿತು.

ಹಿರಿಯರು, ದೇವಸ್ಥಾನದ ಕಾರ್ಯಕರ್ತರು, ಮಹಿಳೆಯರು ಹಾಗೂ ಮಕ್ಕಳು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು.
oo
ಹಲವು ಗ್ರಾಮಗಳಲ್ಲಿನ ವಿಠಲ ದೇವಸ್ಥಾನ  ಹಾಗೂ ವಿಷ್ಣು ದೇವಸ್ಥಾನಗಳಲ್ಲಿ ಶ್ರೀಕೃಷ್ಣ ದೇವರ ಭಜನೆ ಆರಾಧನೆ ವಿಶೇಷ ಪೂಜಾ ಕೈಂಕರ್ಯಗಳನ್ನು ಜರುಗಿಸಲಾಯಿತು. ಈ ಮೂಲಕ ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನೆಲ್ಲೆಡೆಗಳಲ್ಲಿ,ಶ್ರೀಕೃಷ್ಣ ದೇವರ ದರುಷನ ಭಾಗ್ಯ ಅಸ್ತಿಕರಿಗೆ ದೊರಕಿ ಜಗವೆಲ್ಲಾ ಕೃಷ್ಣಮಯ ಎಂಬತಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು