8:14 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಕೂಡ್ಲಿಗಿಯಲ್ಲಿ ಸರ್ವಂ ಕೃಷ್ಣಮಯ: ಮಕ್ಕಳಿಗೆ ವಾಸುದೇವನ ವೇಷ ತೊಡಿಸಿ ಸಂಭ್ರಮಿಸಿದ ಭಕ್ತ ಜನ

01/09/2021, 16:22

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಕೂಡ್ಲಿಗಿ ತಾಲೂಕಿನ ಬಹುತೇಕ ಕಡೆ ಕೃಷ್ಣ ದೇವನ ಪರ್ವ ಜರುಗಿದೆ.ಕೂಡ್ಲಿಗಿ ಪಟ್ಟಣದ ಶ್ರೀವೆಂಕಟೇಶ್ವರ ದೇವಸ್ಥಾನ ಮತ್ತು ಶ್ರೀಕೊತ್ತಲಾಂಜನೇಯ ದೇವಸ್ಥಾನ, ಬಂಡೇ ಬಸಾಪುರ ತಾಂಡದ ಶ್ರೀವಿಠಲದೇವರ ದೇವಸ್ಥಾನದಲ್ಲಿ, ಬೊಪ್ಪಲಾಪುರ ಗ್ರಾಮದಲ್ಲಿ ಶ್ರೀಕೃಷ್ಣ ನ ವಿಶೇಷ ಆರಾಧನೆ ಜರುಗಿತು.

ಭಕ್ತರು ಶ್ರೀಕೃಷ್ಣಲೀಲೆಗಳನ್ನು ಸಾರುವ ವೇಷಗಳನ್ನು ತಮ್ಮ ಮಕ್ಕಳಿಗೆ ತೊಡಿಸಿ ಕೃಷ್ಣನನ್ನು ಕಂಡು ನಲಿದರು. ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ದೇವಸ್ಥಾನಗಳಲ್ಲಿ ಶ್ರೀಕೃಷ್ಣ ದೇವನ ಆರಾಧನೆ ಭರ್ಜರಿ ನಡೆಯಿತು.

ಹಿರಿಯರು, ದೇವಸ್ಥಾನದ ಕಾರ್ಯಕರ್ತರು, ಮಹಿಳೆಯರು ಹಾಗೂ ಮಕ್ಕಳು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು.
oo
ಹಲವು ಗ್ರಾಮಗಳಲ್ಲಿನ ವಿಠಲ ದೇವಸ್ಥಾನ  ಹಾಗೂ ವಿಷ್ಣು ದೇವಸ್ಥಾನಗಳಲ್ಲಿ ಶ್ರೀಕೃಷ್ಣ ದೇವರ ಭಜನೆ ಆರಾಧನೆ ವಿಶೇಷ ಪೂಜಾ ಕೈಂಕರ್ಯಗಳನ್ನು ಜರುಗಿಸಲಾಯಿತು. ಈ ಮೂಲಕ ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನೆಲ್ಲೆಡೆಗಳಲ್ಲಿ,ಶ್ರೀಕೃಷ್ಣ ದೇವರ ದರುಷನ ಭಾಗ್ಯ ಅಸ್ತಿಕರಿಗೆ ದೊರಕಿ ಜಗವೆಲ್ಲಾ ಕೃಷ್ಣಮಯ ಎಂಬತಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು