11:51 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಅನಾವಶ್ಯಕ ಓಡಾಡಿದರೆ ಅರೆಸ್ಟ್ ಗ್ಯಾರಂಟಿ:ರಾಜ್ಯದಲ್ಲಿ ಒಂದೇ ದಿನ 2 ಸಾವಿರಕ್ಕೂ ಹೆಚ್ಚು ವಾಹನಗಳ ಸೀಜ್ 

23/05/2021, 15:16

ಬೆಂಗಳೂರು(reporterkarnataka news): ಕೊರೊನಾ ನಿಯಂತ್ರಣಕ್ಕೆ ಎರಡನೇ ಲಾಕ್ ಡೌನ್ ನಲ್ಲಿ ಕಟ್ಟುನಿಟ್ಟಿನ ಕ್ರಮವನ್ನು ರಾಜ್ಯ ಸರಕಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ.

ಅನಾವಶ್ಯಕ ಓಡಾಟ ನಡೆಸಿದ ವಾಹನಗಳನ್ನು ಸೀಜ್ ಮಾಡಲಾಗುತ್ತಿದೆ. ಇಷ್ಟೇ ಅಲ್ಲ ಕಾರು ಮಾಲೀಕರ ಬಂಧನ ಕೂಡ ನಡೆಸಲಾಗುತ್ತಿದೆ. ಇದೀಗ ಒಂದೇ ದಿನ ರಾಜ್ಯದಲ್ಲಿ 2000ಕ್ಕೂ ಹೆಚ್ಚು ವಾಹನ ಸೀಜ್ ಮಾಡಿ 100ಕ್ಕೂ ಹೆಚ್ಚು ಮಂದಿ ಬಂಧಿಸಲಾಗಿದೆ.

ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿ ಭಾನುವಾರ ಸಮಯ ಮೀರಿ ಬೆಂನ್ಜ್ ಕಾರಿನಲ್ಲಿ ಓಡಾಡುತ್ತಿದ್ದ ವ್ಯಕ್ತಿಯನ್ನು ತಡೆದ ಪೊಲೀಸರು ಕಾರು ಸೀಜ್ ಮಾಡಿದ್ದಾರೆ. ಕಾರು ಚಲಾಯಿಸುತ್ತಿದ್ದ ವ್ಯಕ್ತಿ ತಾನು ಮಹಿಳಾ ಆಯೋಗದ ಅಧ್ಯಕ್ಷೆಗೆ ಕರೆ ಮಾಡುವುದಾಗಿ ಹೇಳಿ, ಕರೆಯನ್ನು ಪೊಲೀಸರಿಗೂ ನೀಡಿದರು. ಮಹಿಳಾ ಆಯೋಗದ ಅಧ್ಯಕ್ಷೆ ಎಂದು ಹೇಳಿಕೊಂಡು ಮಾತನಾಡಿದರು ಕಾರು ಬಿಡುವಂತೆ ಪೊಲೀಸರಿಗೆ ಸೂಚಿಸಿದರು. ಆದರೆ ಪೊಲೀಸರು ಇದಕ್ಕೆ ಕ್ಯಾರೇ ಮಾಡದೆ ಇದು ಸರಕಾರದ ನಿಯಮ ಎಂದು ಕಾರನ್ನು ಸೀಜ್ ಮಾಡಿಯೇ ಬಿಟ್ಟಿತು. ಇನ್ನೊಂದು ಪ್ರಕರಣದಲ್ಲಿ ತಿಥಿ ಪೂಜೆಗೆ ತೆರಳಿದ್ದ ಅರ್ಚಕರನ್ನು ಪೊಲೀಸರು ಲಾಕ್ ಮಾಡಿದ್ದಾರೆ. ಅರ್ಚಕರು ತಾವು ತಿಥಿ ಪೂಜೆ ಮುಗಿಸಿಕೊಂಡು ಬರುತ್ತಿರುವುದಾಗಿ ಹೇಳಿದರೆ,  ಕೊರೊನಾದಿಂದ ಜನರು ಸಾಯುತ್ತಿದ್ದಾರೆ. ನಿಮ್ಮದ್ದೇನು ತಿಥಿ ಪೂಜೆ ಎಂದು ಪ್ರಶ್ನಿಸಿ ಪೊಲೀಸರು ವಾಹನ ಸೀಜ್ ಮಾಡಿದ್ದಾರೆ. ಅಷ್ಟೇ ಅಲ್ಲದೆ

ಕೊರೊನಾ ಪಾಸಿಟಿವ್ ಬಂದವರು ಹೊರಗೆ ಓಡಾಡಿದರೆ ಪೊಲೀಸರು ಅವರ ಮೇಲೆ ಕೇಸು ಹಾಕುವ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ. ಇದೆಲ್ಲ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು